ಬ್ರೇಕಿಂಗ್ ನ್ಯೂಸ್
13-07-25 07:00 pm Mangalore Correspondent ಕರಾವಳಿ
ಮಂಗಳೂರು, ಜುಲೈ.13: ಮಂಗಳೂರಿನಲ್ಲಿ ಹೊಸತಾಗಿ ಅಸ್ತಿತ್ವಕ್ಕೆ ಬಂದಿರುವ ಡಿಕೆ ಟ್ರಾನ್ಸ್ ಪೋರ್ಟ್ ಅಂಡ್ ಲಾಜಿಸ್ಟಿಕ್ ಸರ್ವಿಸಸ್ ಕಂಪನಿಗೆ ನಗರದ ನಾಗುರಿಯ ಗಾರ್ಡಿಯನ್ ಆಂಜೆಲ್ ಚರ್ಚ್ ಆವರಣದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ನಾಗುರಿ ಚರ್ಚ್ ಫಾದರ್ ಫೆಡ್ರಿಕ್ ಮೊಂತೇರೊ ಹೊಸ ಸಂಸ್ಥೆಯ ಪರವಾಗಿ ಪ್ರಾರ್ಥನೆ ನೆರವೇರಿಸಿ, ಶುಭ ಹಾರೈಸಿದ್ದಾರೆ.
ಚರ್ಚ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಹೊಸತಾಗಿ ಆರಂಭಗೊಂಡ ಲಾಜಿಸ್ಟಿಕ್ ಸಂಸ್ಥೆಗೆ ಒಳಿತಾಗಲಿ, ದೇಶದಲ್ಲಿ ಹೆಸರು ಮಾಡಲಿ ಎಂದು ಶುಭ ಹಾರೈಸಿದರು. ಪ್ರಾಸ್ತಾವಿಕ ಮಾತನಾಡಿದ ಡಿಕೆ ಗ್ರೂಪ್ ಆಫ್ ಸಂಸ್ಥೆಗಳ ಚೇರ್ಮನ್ ಆಲ್ವಿನ್ ಯೋಜಲ್ ನೊರೊನ್ಹಾ ಅವರು ಹೊಸತಾಗಿ ಸಾರಿಗೆ ವಲಯಕ್ಕೆ ಪಾದಾರ್ಪಣೆ ಮಾಡುತ್ತಿದ್ದೇವೆ. ದೇಶದಲ್ಲಿ 11 ಲಕ್ಷ ಕೋಟಿಯಷ್ಟು ವಹಿವಾಟು ಸಾರಿಗೆ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಅದರಲ್ಲಿ ಕಿಂಚಿತ್ ಕಾಣಿಕೆ ತಮ್ಮದೂ ಇರಲೆಂದು ಹೊಸ ವ್ಯವಹಾರ ಆರಂಭಿಸುತ್ತಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ನಮ್ಮ ಸಂಸ್ಥೆಯ ನಿಧಿ ಹಣಕಾಸು ಸಂಸ್ಥೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 13 ಶಾಖೆಗಳನ್ನು ತೆರೆದಿದ್ದು, ಉತ್ತಮ ವಹಿವಾಟು ನಡೆಸುತ್ತಿದ್ದೇವೆ. ಇದರ ನಡುವೆ, ಹಣಕಾಸು ವ್ಯವಹಾರ ಸುಲಭವಾಗಲು ಸೊಸೈಟಿಯನ್ನೂ ಆರಂಭಿಸಲಾಗಿದೆ. ಮುಂದಿನ ಒಂದು ವರ್ಷದಲ್ಲಿ ಸಾರಿಗೆ ಉದ್ದೇಶಕ್ಕಾಗಿ 20 ವಾಹನಗಳನ್ನು ಸಂಸ್ಥೆಯ ವತಿಯಿಂದ ಇಳಿಸುವ ಗುರಿ ಇಟ್ಟುಕೊಂಡಿದ್ದೇವೆ ಎಂದರು.





ವಿಆರ್ ಎಲ್ ಲಾಜಿಸ್ಟಿಕ್ ಸಂಸ್ಥೆಗೆ ದೇಶದಲ್ಲಿ ದೊಡ್ಡ ಸ್ಥಾನ ಇದೆ. ಆದರೆ ಅವರು ಕೂಡ ಆರಂಭದಲ್ಲಿ ಒಂದೇ ಲಾರಿಯಿಂದ ವ್ಯವಹಾರ ಆರಂಭಿಸಿದ್ದರು. ಈಗ ಲಾಜಿಸ್ಟಿಕ್ ವಹಿವಾಟಿಗೆ ಆರು ಸಾವಿರ ಲಾರಿಗಳನ್ನು ವಿಆರ್ ಎಲ್ ಇಟ್ಟುಕೊಂಡಿದೆ. ಇದೇ ವೇಳೆ, ಮಹೀಂದ್ರಾ ಲಾಜಿಸ್ಟಿಕ್ ಸಂಸ್ಥೆಯು ದೇಶದಲ್ಲಿ 15 ಸಾವಿರ ಟ್ರಕ್ ಗಳನ್ನು ಹೊಂದಿದ್ದು ಅತಿ ದೊಡ್ಡ ಲಾಜಿಸ್ಟಿಕ್ ವಹಿವಾಟು ನಡೆಸುತ್ತದೆ. ಸಾರಿಗೆ ವಲಯದಲ್ಲೇ ಒಂದು ವರ್ಷದಲ್ಲಿ 11 ಲಕ್ಷ ಕೋಟಿ ವಹಿವಾಟು ಆಗುತ್ತೆ ಎಂದಾದರೆ, ಇದರ ವ್ಯಾಪ್ತಿ ಅಂದಾಜಿಸಬಹುದು. ನಾವು ನಿಶ್ಚಿತ ಗುರಿ ಇಟ್ಟುಕೊಂಡು ಮುನ್ನಡೆದರೆ ಯಶಸ್ಸು ಖಚಿತ ಎನ್ನುವ ಭಾವನೆ ನನ್ನದು ಎಂದು ಆಲ್ವಿನ್ ಜೋಯಲ್ ನೊರೊನ್ಹಾ ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಮಾತನಾಡಿ, ಯಾವುದೇ ವಹಿವಾಟಿನಲ್ಲಿ ಲಾಭ ಗಳಿಸುವುದು ಸುಲಭ ಇಲ್ಲ. ಆದರೆ ಗುಣಮಟ್ಟದ ನೌಕರ ವೃಂದ ಸಿಕ್ಕಿದರೆ ಸಂಸ್ಥೆ ಅಭಿವೃದ್ಧಿಯಾಗುವುದು ನಿಶ್ಚಿತ. ವ್ಯವಹಾರ ವೃದ್ಧಿಯಾದರೆ ಉದ್ಯೋಗವೂ ಹೆಚ್ಚುವುದರಿಂದ ದೇಶ, ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿದಂತಾಗುತ್ತದೆ. ಆಲ್ವಿನ್ ಅವರು ಹೊಸ ವ್ಯವಹಾರ ಆರಂಭಿಸಿದ್ದು, ಅವರ ಇಚ್ಛೆಯಂತೆ ದೊಡ್ಡ ಸಂಸ್ಥೆಯಾಗಿ ಬೆಳೆಯಲಿ ಎಂದರು. ಮಹಾನಗರ ಪಾಲಿಕೆಯ ಅಳಪೆ ವಾರ್ಡಿನ ಕಾರ್ಪೊರೇಟರ್ ಶೋಭಾ ಪೂಜಾರಿ, ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ್ ಶೆಣೈ ಮತ್ತು ಡಿಕೆ ಲಾಜಿಸ್ಟಿಕ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
A new logistics venture, DK Transport and Logistics Services, was officially launched in Naguri, Mangalore, marking a significant expansion of the DK Group into the transportation sector. Speaking at the event held at the church hall, Alwyn Joel Noronha, Chairman of DK Group of Institutions, said: “We are stepping into the transportation sector with a focused vision. With India witnessing logistics transactions worth over ₹11 lakh crore annually, we aim to contribute our share to this massive industry.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm