ಬ್ರೇಕಿಂಗ್ ನ್ಯೂಸ್
10-08-20 12:31 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಕೊರೊನಾ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೋಂಕು ಮೆಟ್ಟಿ ನಿಂತು ಸಾಧನೆ ಮಾಡಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ಬಾರಿ ಮೊದಲ ಸಾಲಿನಲ್ಲಿರುತ್ತಿದ್ದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ 7 ಮತ್ತು 12ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ವಿಶೇಷ ಅಂದರೆ ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ ರಾಜ್ಯದಲ್ಲಿ ಆರು ಮಂದಿ ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಶಾಲೆಯ ಅನುಷ್ ಕೂಡ ಸೇರಿದ್ದಾನೆ. ಇತರೇ ಆರು ವಿದ್ಯಾರ್ಥಿಗಳ ಜೊತೆ ಅನುಷ್ ಕೂಡ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಸಾಧನೆ ಮಾಡಿದ್ದಾನೆ. ಅನುಷ್, ಬಳ್ಪ ಗ್ರಾಮದ ಲೋಕೇಶ್ ಮತ್ತು ಉಷಾ ದಂಪತಿಯ ಪುತ್ರನಾಗಿದ್ದು ರಾಜ್ಯಕ್ಕೆ ಟಾಪರ್ ಆಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದಾನೆ.
ಇನ್ನು 624 ಅಂಕ ಗಳಿಸಿದವರಲ್ಲಿ 11 ಮಂದಿ ಇದ್ದಾರೆ. ವಿಟ್ಲದ ಅಳಿಕೆಯ ಸತ್ಯಸಾಯಿ ಲೋಕಸೇವಾ ಶಾಲೆಯ ಸುಮುಖ, ಮಂಗಳೂರಿನ ಕೆನರಾ ಹೈಸ್ಕೂಲಿನ ನಿಧಿ ರಾವ್, ಉಡುಪಿ ಜಿಲ್ಲೆಯ ಬೈಂದೂರಿನ ಸಾಂದೀಪನಿ ಶಾಲೆಯ ಸುರಭಿ ಎಸ್. ಶೆಟ್ಟಿ 624 ಅಂಕದ ಸಾಧನೆ ಮಾಡಿದವರಲ್ಲಿದ್ದಾರೆ.
623 ಮಂದಿ ಅಂಕ ಗಳಿಸಿದವರಲ್ಲಿ ಮೂವರಿದ್ದಾರೆ. ಇನ್ನು 622 ಅಂಕ ಗಳಿಸಿದವರಲ್ಲೂ ಮೂರು ಮಂದಿ ಇದ್ದಾರೆ. 622 ಅಂಕದ ಗಳಿಕೆಯಲ್ಲಿ ಮೂಡುಬಿದ್ರೆಯ ಆಳ್ವಾಸ್ ಪ್ರೌಢಶಾಲೆಯ ಇಬ್ಬರಿದ್ದು ಪ್ರಕೃತಿ ಪ್ರಿಯ ಮತ್ತು ಸಮ್ಮದ್ ಮಹಾವೀರ್ ಈ ಸಾಧನೆ ಮಾಡಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm