ಬ್ರೇಕಿಂಗ್ ನ್ಯೂಸ್
10-08-20 12:31 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಕೊರೊನಾ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೋಂಕು ಮೆಟ್ಟಿ ನಿಂತು ಸಾಧನೆ ಮಾಡಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ಬಾರಿ ಮೊದಲ ಸಾಲಿನಲ್ಲಿರುತ್ತಿದ್ದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ 7 ಮತ್ತು 12ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ವಿಶೇಷ ಅಂದರೆ ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ ರಾಜ್ಯದಲ್ಲಿ ಆರು ಮಂದಿ ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಶಾಲೆಯ ಅನುಷ್ ಕೂಡ ಸೇರಿದ್ದಾನೆ. ಇತರೇ ಆರು ವಿದ್ಯಾರ್ಥಿಗಳ ಜೊತೆ ಅನುಷ್ ಕೂಡ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಸಾಧನೆ ಮಾಡಿದ್ದಾನೆ. ಅನುಷ್, ಬಳ್ಪ ಗ್ರಾಮದ ಲೋಕೇಶ್ ಮತ್ತು ಉಷಾ ದಂಪತಿಯ ಪುತ್ರನಾಗಿದ್ದು ರಾಜ್ಯಕ್ಕೆ ಟಾಪರ್ ಆಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದಾನೆ.
ಇನ್ನು 624 ಅಂಕ ಗಳಿಸಿದವರಲ್ಲಿ 11 ಮಂದಿ ಇದ್ದಾರೆ. ವಿಟ್ಲದ ಅಳಿಕೆಯ ಸತ್ಯಸಾಯಿ ಲೋಕಸೇವಾ ಶಾಲೆಯ ಸುಮುಖ, ಮಂಗಳೂರಿನ ಕೆನರಾ ಹೈಸ್ಕೂಲಿನ ನಿಧಿ ರಾವ್, ಉಡುಪಿ ಜಿಲ್ಲೆಯ ಬೈಂದೂರಿನ ಸಾಂದೀಪನಿ ಶಾಲೆಯ ಸುರಭಿ ಎಸ್. ಶೆಟ್ಟಿ 624 ಅಂಕದ ಸಾಧನೆ ಮಾಡಿದವರಲ್ಲಿದ್ದಾರೆ.
623 ಮಂದಿ ಅಂಕ ಗಳಿಸಿದವರಲ್ಲಿ ಮೂವರಿದ್ದಾರೆ. ಇನ್ನು 622 ಅಂಕ ಗಳಿಸಿದವರಲ್ಲೂ ಮೂರು ಮಂದಿ ಇದ್ದಾರೆ. 622 ಅಂಕದ ಗಳಿಕೆಯಲ್ಲಿ ಮೂಡುಬಿದ್ರೆಯ ಆಳ್ವಾಸ್ ಪ್ರೌಢಶಾಲೆಯ ಇಬ್ಬರಿದ್ದು ಪ್ರಕೃತಿ ಪ್ರಿಯ ಮತ್ತು ಸಮ್ಮದ್ ಮಹಾವೀರ್ ಈ ಸಾಧನೆ ಮಾಡಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm