ಬ್ರೇಕಿಂಗ್ ನ್ಯೂಸ್
10-08-20 12:31 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಕೊರೊನಾ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೋಂಕು ಮೆಟ್ಟಿ ನಿಂತು ಸಾಧನೆ ಮಾಡಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ಬಾರಿ ಮೊದಲ ಸಾಲಿನಲ್ಲಿರುತ್ತಿದ್ದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ 7 ಮತ್ತು 12ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ವಿಶೇಷ ಅಂದರೆ ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ ರಾಜ್ಯದಲ್ಲಿ ಆರು ಮಂದಿ ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಶಾಲೆಯ ಅನುಷ್ ಕೂಡ ಸೇರಿದ್ದಾನೆ. ಇತರೇ ಆರು ವಿದ್ಯಾರ್ಥಿಗಳ ಜೊತೆ ಅನುಷ್ ಕೂಡ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಸಾಧನೆ ಮಾಡಿದ್ದಾನೆ. ಅನುಷ್, ಬಳ್ಪ ಗ್ರಾಮದ ಲೋಕೇಶ್ ಮತ್ತು ಉಷಾ ದಂಪತಿಯ ಪುತ್ರನಾಗಿದ್ದು ರಾಜ್ಯಕ್ಕೆ ಟಾಪರ್ ಆಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದಾನೆ.
ಇನ್ನು 624 ಅಂಕ ಗಳಿಸಿದವರಲ್ಲಿ 11 ಮಂದಿ ಇದ್ದಾರೆ. ವಿಟ್ಲದ ಅಳಿಕೆಯ ಸತ್ಯಸಾಯಿ ಲೋಕಸೇವಾ ಶಾಲೆಯ ಸುಮುಖ, ಮಂಗಳೂರಿನ ಕೆನರಾ ಹೈಸ್ಕೂಲಿನ ನಿಧಿ ರಾವ್, ಉಡುಪಿ ಜಿಲ್ಲೆಯ ಬೈಂದೂರಿನ ಸಾಂದೀಪನಿ ಶಾಲೆಯ ಸುರಭಿ ಎಸ್. ಶೆಟ್ಟಿ 624 ಅಂಕದ ಸಾಧನೆ ಮಾಡಿದವರಲ್ಲಿದ್ದಾರೆ.
623 ಮಂದಿ ಅಂಕ ಗಳಿಸಿದವರಲ್ಲಿ ಮೂವರಿದ್ದಾರೆ. ಇನ್ನು 622 ಅಂಕ ಗಳಿಸಿದವರಲ್ಲೂ ಮೂರು ಮಂದಿ ಇದ್ದಾರೆ. 622 ಅಂಕದ ಗಳಿಕೆಯಲ್ಲಿ ಮೂಡುಬಿದ್ರೆಯ ಆಳ್ವಾಸ್ ಪ್ರೌಢಶಾಲೆಯ ಇಬ್ಬರಿದ್ದು ಪ್ರಕೃತಿ ಪ್ರಿಯ ಮತ್ತು ಸಮ್ಮದ್ ಮಹಾವೀರ್ ಈ ಸಾಧನೆ ಮಾಡಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am