ಬ್ರೇಕಿಂಗ್ ನ್ಯೂಸ್
18-07-25 02:36 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುರುವಾರ ರಾತ್ರಿ ತೊಕ್ಕೊಟ್ಟು ಒಳಪೇಟೆಯ ಗತಕಾಲ ವೈಭವದ ಶತಮಾನ ಕಂಡ ಹಳೆಯ ಖಾಸಗಿ ವಾಣಿಜ್ಯ& ವಸತಿ ಸಂಕೀರ್ಣದ ಹಂಚಿನ ಮೇಲ್ಛಾವಣಿ ಧರೆಗುರುಳಿ ಬಿದ್ದಿದೆ. ಮಧ್ಯರಾತ್ರಿ ಘಟನೆ ನಡೆದ ಪರಿಣಾಮ ಸಂಭವನೀಯ ಭಾರೀ ಅನಾಹುತ ತಪ್ಪಿದೆ.
ಮಧ್ಯರಾತ್ರಿ ಎರಡೂವರೆ ಗಂಟೆ ವೇಳೆಗೆ ಕಟ್ಟಡದ ಹಂಚಿನ ಛಾವಣಿ ಧರೆಗುರುಳಿ ಬಿದ್ದಿದೆ. ನೂರು ವರುಷದ ಹಿಂದಿನ ಹಳೆಯ ಶಿಥಿಲ ಕಟ್ಟಡದಲ್ಲಿ ಸ್ಥಳೀಯ ಸಂಘಟನೆಯೊಂದರ ಕಚೇರಿ ಸೇರಿದಂತೆ ಎರಡು ಬೀಡಿ ಬ್ರಾಂಚ್ ಗಳು ಕಾರ್ಯಾಚರಿಸುತ್ತಿತ್ತು. ಕಟ್ಟಡದ ಹಿಂಬದಿ ಭಾಗದಲ್ಲಿ ಎರಡು ಬಾಡಿಗೆ ಮನೆಗಳಿದ್ದು ಮನೆಮಂದಿಗೆ ಘಟನೆಯಿಂದ ಯಾವುದೇ ಹಾನಿಯಾಗಿಲ್ಲ.





ಕಟ್ಟಡದ ಹಂಚಿನ ಮೇಲ್ಚಾವಣಿಯು ತೊಕ್ಕೊಟ್ಟು ಚರ್ಚ್ ಸಂಪರ್ಕದ ಮುಖ್ಯ ರಸ್ತೆಗೆ ಕುಸಿದು ದೊಪ್ಪನೆ ಬಿದ್ದಿರುವ ದೃಶ್ಯ ಸಿಸಿಟಿವಿ ಫೂಟೇಜಲ್ಲಿ ದಾಖಲಾಗಿದೆ. ಹಗಲಿನ ವೇಳೆ ಈ ಕಟ್ಟಡದ ಮುಂಭಾಗದ ರಸ್ತೆಯಿಂದ ಶಾಲಾ ಮಕ್ಕಳು, ಜನಸಾಮಾನ್ಯರು ಸೇರಿದಂತೆ ವಾಹನಗಳು ಹಾದು ಹೋಗುತ್ತಿರುತ್ತವೆ. ಈ ವೇಳೆ ಘಟನೆ ನಡೆದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ಉದ್ದವಾದ ಹಳೆಯ ಕಟ್ಟಡದ ಅಳಿದುಳಿದ ಒಂದು ಭಾಗದಲ್ಲಿ ಫ್ಯಾನ್ಸಿ ಸೆಂಟರೊಂದು ವ್ಯವಹಾರ ನಡೆಸುತ್ತಿದ್ದು, ಮತ್ತೊಂದು ಭಾಗದಲ್ಲಿ ಸ್ಥಳೀಯ ಮತ್ತೊಂದು ಸಂಘಟನೆಯ ಕಚೇರಿ ಕಾರ್ಯಚರಿಸುತ್ತಿದೆ. ದಶಕಗಳ ಹಿಂದೆ ಈ ಕಟ್ಟಡದಲ್ಲಿ ತೊಕ್ಕೊಟ್ಟಿನ ಏಕೈಕ ಶೇಂದಿ ಅಂಗಡಿ ವಹಿವಾಟು ನಡೆಸುತ್ತಿದ್ದು, ಶೇಂದಿ ಪ್ರಿಯರ ನೆಚ್ಚಿನ ಕೇಂದ್ರ ಇದಾಗಿತ್ತು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಗೆ ಬಿದ್ದಿದ್ದ ಮೇಲ್ಚಾವಣಿಯ ಅವಶೇಷಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
Continuous heavy rains over the past two days led to the partial collapse of the roof of a century-old private commercial-cum-residential building in the heart of Tokkottu’s inner market area late Thursday night. Fortunately, the incident occurred around 2:30 AM, preventing what could have been a major tragedy.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm