ಬ್ರೇಕಿಂಗ್ ನ್ಯೂಸ್
18-07-25 02:36 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುರುವಾರ ರಾತ್ರಿ ತೊಕ್ಕೊಟ್ಟು ಒಳಪೇಟೆಯ ಗತಕಾಲ ವೈಭವದ ಶತಮಾನ ಕಂಡ ಹಳೆಯ ಖಾಸಗಿ ವಾಣಿಜ್ಯ& ವಸತಿ ಸಂಕೀರ್ಣದ ಹಂಚಿನ ಮೇಲ್ಛಾವಣಿ ಧರೆಗುರುಳಿ ಬಿದ್ದಿದೆ. ಮಧ್ಯರಾತ್ರಿ ಘಟನೆ ನಡೆದ ಪರಿಣಾಮ ಸಂಭವನೀಯ ಭಾರೀ ಅನಾಹುತ ತಪ್ಪಿದೆ.
ಮಧ್ಯರಾತ್ರಿ ಎರಡೂವರೆ ಗಂಟೆ ವೇಳೆಗೆ ಕಟ್ಟಡದ ಹಂಚಿನ ಛಾವಣಿ ಧರೆಗುರುಳಿ ಬಿದ್ದಿದೆ. ನೂರು ವರುಷದ ಹಿಂದಿನ ಹಳೆಯ ಶಿಥಿಲ ಕಟ್ಟಡದಲ್ಲಿ ಸ್ಥಳೀಯ ಸಂಘಟನೆಯೊಂದರ ಕಚೇರಿ ಸೇರಿದಂತೆ ಎರಡು ಬೀಡಿ ಬ್ರಾಂಚ್ ಗಳು ಕಾರ್ಯಾಚರಿಸುತ್ತಿತ್ತು. ಕಟ್ಟಡದ ಹಿಂಬದಿ ಭಾಗದಲ್ಲಿ ಎರಡು ಬಾಡಿಗೆ ಮನೆಗಳಿದ್ದು ಮನೆಮಂದಿಗೆ ಘಟನೆಯಿಂದ ಯಾವುದೇ ಹಾನಿಯಾಗಿಲ್ಲ.





ಕಟ್ಟಡದ ಹಂಚಿನ ಮೇಲ್ಚಾವಣಿಯು ತೊಕ್ಕೊಟ್ಟು ಚರ್ಚ್ ಸಂಪರ್ಕದ ಮುಖ್ಯ ರಸ್ತೆಗೆ ಕುಸಿದು ದೊಪ್ಪನೆ ಬಿದ್ದಿರುವ ದೃಶ್ಯ ಸಿಸಿಟಿವಿ ಫೂಟೇಜಲ್ಲಿ ದಾಖಲಾಗಿದೆ. ಹಗಲಿನ ವೇಳೆ ಈ ಕಟ್ಟಡದ ಮುಂಭಾಗದ ರಸ್ತೆಯಿಂದ ಶಾಲಾ ಮಕ್ಕಳು, ಜನಸಾಮಾನ್ಯರು ಸೇರಿದಂತೆ ವಾಹನಗಳು ಹಾದು ಹೋಗುತ್ತಿರುತ್ತವೆ. ಈ ವೇಳೆ ಘಟನೆ ನಡೆದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ಉದ್ದವಾದ ಹಳೆಯ ಕಟ್ಟಡದ ಅಳಿದುಳಿದ ಒಂದು ಭಾಗದಲ್ಲಿ ಫ್ಯಾನ್ಸಿ ಸೆಂಟರೊಂದು ವ್ಯವಹಾರ ನಡೆಸುತ್ತಿದ್ದು, ಮತ್ತೊಂದು ಭಾಗದಲ್ಲಿ ಸ್ಥಳೀಯ ಮತ್ತೊಂದು ಸಂಘಟನೆಯ ಕಚೇರಿ ಕಾರ್ಯಚರಿಸುತ್ತಿದೆ. ದಶಕಗಳ ಹಿಂದೆ ಈ ಕಟ್ಟಡದಲ್ಲಿ ತೊಕ್ಕೊಟ್ಟಿನ ಏಕೈಕ ಶೇಂದಿ ಅಂಗಡಿ ವಹಿವಾಟು ನಡೆಸುತ್ತಿದ್ದು, ಶೇಂದಿ ಪ್ರಿಯರ ನೆಚ್ಚಿನ ಕೇಂದ್ರ ಇದಾಗಿತ್ತು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಗೆ ಬಿದ್ದಿದ್ದ ಮೇಲ್ಚಾವಣಿಯ ಅವಶೇಷಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
Continuous heavy rains over the past two days led to the partial collapse of the roof of a century-old private commercial-cum-residential building in the heart of Tokkottu’s inner market area late Thursday night. Fortunately, the incident occurred around 2:30 AM, preventing what could have been a major tragedy.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm