ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm