ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm