ಬ್ರೇಕಿಂಗ್ ನ್ಯೂಸ್
21-07-25 04:03 am Mangaluru Correspondent ಕರಾವಳಿ
ಮಂಗಳೂರು, ಜುಲೈ 21: ರಾಜ್ಯ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಮೇಲೆ ಕೇಳಿಬಂದ ಆರೋಪ, ವಿವಾದಗಳ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ತನಿಖೆಗೆ ಆದೇಶ ನೀಡಿದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಸತ್ಯ ಹೊರಬರಬೇಕು. ನ್ಯಾಯಯುತ, ನಿಷ್ಪಕ್ಷಪಾತ ತನಿಖೆಯಾಗಿ ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಎಸ್ಐಟಿ ತನಿಖೆ ಕುರಿತು ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದು ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 'ಹಲವಾರು ಶವಗಳನ್ನು ಹೂತಿದ್ದೆ' ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ಹೇಳಿದ್ದಾರೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ 'ಸತ್ಯ'. ಹೀಗಾಗಿ ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಹೊರತರಬೇಕಿದೆ. ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಕೆ.ಪಾರ್ಶ್ವನಾಥ್ ಜೈನ್ ಆಗ್ರಹಿಸಿದ್ದಾರೆ.
ಪದೇ ಪದೇ ಆರೋಪಗಳನ್ನು ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಕೆಲಸಗಳು ನಡೆಯುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಇದರ ಸತ್ಯಾಸತ್ಯತೆ ಸಾರ್ವಜನಿಕರ ಮುಂದೆ ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಧರ್ಮಸ್ಥಳ ಆಗ್ರಹಿಸುತ್ತಿದೆ ಎಂದಿದ್ದಾರೆ.
Sri Kshetra Dharmasthala has welcomed the Karnataka government’s decision to constitute a Special Investigation Team (SIT) to probe the recent allegations and controversies surrounding the temple town. In an official statement released on behalf of the institution, the management expressed hope that the SIT will conduct an impartial and transparent investigation to uncover the truth and present it before the public.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm