ಬ್ರೇಕಿಂಗ್ ನ್ಯೂಸ್
21-07-25 04:03 am Mangaluru Correspondent ಕರಾವಳಿ
ಮಂಗಳೂರು, ಜುಲೈ 21: ರಾಜ್ಯ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಮೇಲೆ ಕೇಳಿಬಂದ ಆರೋಪ, ವಿವಾದಗಳ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ತನಿಖೆಗೆ ಆದೇಶ ನೀಡಿದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಸತ್ಯ ಹೊರಬರಬೇಕು. ನ್ಯಾಯಯುತ, ನಿಷ್ಪಕ್ಷಪಾತ ತನಿಖೆಯಾಗಿ ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಎಸ್ಐಟಿ ತನಿಖೆ ಕುರಿತು ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದು ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 'ಹಲವಾರು ಶವಗಳನ್ನು ಹೂತಿದ್ದೆ' ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ಹೇಳಿದ್ದಾರೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ 'ಸತ್ಯ'. ಹೀಗಾಗಿ ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಹೊರತರಬೇಕಿದೆ. ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಕೆ.ಪಾರ್ಶ್ವನಾಥ್ ಜೈನ್ ಆಗ್ರಹಿಸಿದ್ದಾರೆ.
ಪದೇ ಪದೇ ಆರೋಪಗಳನ್ನು ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಕೆಲಸಗಳು ನಡೆಯುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಇದರ ಸತ್ಯಾಸತ್ಯತೆ ಸಾರ್ವಜನಿಕರ ಮುಂದೆ ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಧರ್ಮಸ್ಥಳ ಆಗ್ರಹಿಸುತ್ತಿದೆ ಎಂದಿದ್ದಾರೆ.
Sri Kshetra Dharmasthala has welcomed the Karnataka government’s decision to constitute a Special Investigation Team (SIT) to probe the recent allegations and controversies surrounding the temple town. In an official statement released on behalf of the institution, the management expressed hope that the SIT will conduct an impartial and transparent investigation to uncover the truth and present it before the public.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm