ಬ್ರೇಕಿಂಗ್ ನ್ಯೂಸ್
23-07-25 10:19 am Mangaluru Correspondent ಕರಾವಳಿ
ಬೆಂಗಳೂರು, ಜುಲೈ 23: ಧರ್ಮಸ್ಥಳ ಹೆಣ ಹೂತ ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್ಐಟಿ ತಂಡಕ್ಕೆ ಮತ್ತೆ 20 ಪೊಲೀಸ್ ಅಧಿಕಾರಿಗಳನ್ನು ಸೇರ್ಪಡೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಎಎಸ್ಐಗಳನ್ನು ಎಸ್ಐಟಿ ತಂಡಕ್ಕೆ ನೇಮಿಸಿ ಡಿಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಬಗ್ಗೆ ಇಂದಿನಿಂದಲೇ ತನಿಖೆ ಆರಂಭವಾಗಲಿದೆ ಎನ್ನುವ ಮಾಹಿತಿಯಿದ್ದು ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರುವ ಎಸ್ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಮತ್ತು ಧರ್ಮಸ್ಥಳ ಪೊಲೀಸ್ ಇನ್ಸ್ಪೆಕ್ಟರ್ ಅವರಿಂದ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಅಬಳಿಕ ತನಿಖೆ ಪ್ರಕ್ರಿಯೆ ಬಗ್ಗೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನಿರ್ಧರಿಸಲಿದ್ದಾರೆ. ವ್ಯಕ್ತಿಯ ದೂರು ಆಧರಿಸಿ ಹಲವು ಆಯಾಮಗಳಲ್ಲಿ ತನಿಖೆ ನಡೆಯಲಿದೆ.

20 ಅಧಿಕಾರಿಗಳ ತಂಡಕ್ಕೆ ಯಾರೆಲ್ಲ ?
ಮಂಗಳೂರು ಡಿಸಿಆರ್ಇ ಎಸ್ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್ಪಿ ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್ಪಿ ಮಂಜುನಾಥ್, ಸಿಎಸ್ಪಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್, ಸಿಎಸ್ಪಿ ಇನ್ಸ್ಪೆಕ್ಟರ್ ಇಸಿ ಸಂಪತ್, ಸಿಎಸ್ಪಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ಕುಸುಮಾಧರ್ ತಂಡದಲ್ಲಿದ್ದಾರೆ.
ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ರತೇಜ, ಸಿಎಸ್ಪಿ ಸಬ್ ಇನ್ಸ್ ಪೆಕ್ಟರ್ ಕೋಕಿಲ ನಾಯಕ್, ಸಿಎಸ್ಪಿ ಸಬ್ ಇನ್ಸ್ ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್ಪಿ ಸಬ್ ಇನ್ಸ್ಪೆಕ್ಟರ್ ಶಿವಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜ್ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆರ್.ಸುಹಾಸ್ ಇದ್ದಾರೆ.
ಉತ್ತರ ಕನ್ನಡ ಮುಂಡಗೋಡ ಠಾಣೆ ಸಬ್ ಇನ್ಸ್ ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್ ಇನ್ಸ್ ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹರೀಶ್ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್ ಕಾನ್ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್ಎಂಎಸ್ ಹೆಡ್ ಕಾನ್ಸ್ಟೇಬಲ್ ದೇವರಾಜ್ ಅವರನ್ನು ನಿಯೋಜನೆ ಮಾಡಲಾಗಿದೆ. ಅಪರಾಧ ಪತ್ತೆಯಲ್ಲಿ ಪರಿಣತಿ ಪಡೆದ ಪೊಲೀಸರ ತಂಡವನ್ನು ರಚಿಸಲಾಗಿದ್ದು ಇವರು ಸರದಿಯಂತೆ ಬಂದು ತನಿಖೆ ನಡೆಸುವ ಸಾಧ್ಯತೆಯಿದೆ.
The Special Investigation Team (SIT) probing the alleged burial of bodies in Dharmasthala has been further strengthened with the appointment of 20 more police officers. The order was issued by Karnataka DGP Dr. M.A. Saleem, deploying officers with crime detection experience from Dakshina Kannada, Udupi, and Uttara Kannada districts.The SIT, led by DGP (Internal Security Division & Cyber Command) Pronab Mohanty, will officially commence its investigation today.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm