ಬ್ರೇಕಿಂಗ್ ನ್ಯೂಸ್
25-07-25 06:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 25 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ರಚನೆಗೊಂಡು ಐದು ದಿನಗಳ ನಂತರ ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ, ಡಿಐಜಿ ದರ್ಜೆಯ ಎಂ.ಎನ್.ಅನುಚೇತ್ ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ಮಂಗಳೂರಿಗೆ ಆಗಮಿಸಿದ್ದು ತನಿಖಾ ತಂಡದ ಸದಸ್ಯರ ಜೊತೆಗೆ ನಗರದ ಮಲ್ಲಿಕಟ್ಟೆ ಐಬಿಯಲ್ಲಿ ಕುಳಿತು ಸಭೆ ನಡೆಸಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅನುಚೇತ್ ನೇರವಾಗಿ ನಗರದ ಓಷ್ಯನ್ ಪರ್ಲ್ ಹೊಟೇಲ್ ಆಗಮಿಸಿದ್ದಾರೆ. ಅಲ್ಲಿಂದ ಮಲ್ಲಿಕಟ್ಟೆಯ ಸರಕಾರಿ ಅತಿಥಿ ಬಂಗಲೆಗೆ ತೆರಳಿ ಎಸ್ಐಟಿ ತಂಡದ ಇತರ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಎಸ್ಐಟಿ ತಂಡದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಹೊರತುಪಡಿಸಿ ಉಳಿದವರು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್, ಎಸ್ಐ ಇನ್ನಿತರ ಸಿಬಂದಿಯನ್ನು ನೇಮಿಸಲಾಗಿದೆ.




ಏಂಟಿ ನಕ್ಸಲ್ ಟೀಮಿನಲ್ಲಿದ್ದ ಜಿತೇಂದ್ರ ಕುಮಾರ್ ದಯಾಮ ತನಿಖಾ ತಂಡದಲ್ಲಿ ಎಸ್ಪಿ ಇದ್ದಾರೆ. ಈಗ ಮಂಗಳೂರಿಗೆ ಬಂದಿರುವ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದು ಖಚಿತವಾಗಿಲ್ಲ. 2-3 ಪೊಲೀಸರ ವಾಹನಗಳಿದ್ದು, ಐಪಿಎಸ್ ಅಧಿಕಾರಿ ಅನುಚೇತ್ ಕೂಡ ಮಂಗಳೂರಿಗೆ ಬಂದು ತನಿಖಾ ತಂಡದ ಜೊತೆ ಸೇರಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಎಸ್ಪಿಯಿಂದ ಮಾಹಿತಿ ಪಡೆದು ಆನಂತರ ಧರ್ಮಸ್ಥಳ ತೆರಳುವ ಸಾಧ್ಯತೆಯಿದೆ. ಜುಲೈ 3ರಂದು ಧರ್ಮಸ್ಥಳದಲ್ಲಿ ಈ ಹಿಂದೆ ಸ್ವಚ್ಛತಾ ಕಾರ್ಮಿಕನಾಗಿದ್ದೆ ಎಂದು ಹೇಳಿಕೊಂಡಿದ್ದ ವ್ಯಕ್ತಿ ತಾನು ನೂರಾರು ಹೆಣಗಳನ್ನು ಕಾಡಿನಲ್ಲಿ ಹೂತು ಹಾಕಿದ್ದೆ, ಪ್ರಾಯಶ್ಚಿತ್ತಕ್ಕಾಗಿ ಎಲ್ಲವನ್ನೂ ಹೇಳುತ್ತೇನೆ, ಹೆಣ ಹೂತಿದ್ದನ್ನು ತೆಗೆದು ತೋರಿಸುತ್ತೇನೆ ಎಂದು ಹೇಳಿದ್ದ. ಈ ವಿಚಾರ ಇಡೀ ದೇಶದಲ್ಲಿ ಸುದ್ದಿಯಾಗಿದ್ದಲ್ಲದೆ, ರಾಷ್ಟ್ರೀಯ ಮಾಧ್ಯಮಗಳು ಮತ್ತು ಕೇರಳದ ಮಾಧ್ಯಮಗಳು ಹೆಚ್ಚು ಬೆನ್ನು ಬಿದ್ದಿವೆ. ಇದರಿಂದ ಒತ್ತಡಕ್ಕೆ ಬಿದ್ದ ರಾಜ್ಯ ಸರಕಾರ ಘಟನೆ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಮಾಡಿತ್ತು.
Five days after the Karnataka government constituted a Special Investigation Team (SIT) to probe the alleged mass burial case in Dharmasthala, senior police officers have officially launched the investigation. DIG M.N. Anucheth, a key member of the SIT, arrived in Mangaluru on Friday evening at 4 PM to initiate proceedings on the ground.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm