ಬ್ರೇಕಿಂಗ್ ನ್ಯೂಸ್
25-07-25 08:25 pm Mangalore Correspondent ಕರಾವಳಿ
ಮಂಗಳೂರು, ಜುಲೈ 25 : ಧರ್ಮಸ್ಥಳ ಹೆಣ ಹೂತ ಪ್ರಕರಣದ ಬಗ್ಗೆ ತನಿಖೆಗೆ ನೇಮಕಗೊಂಡ ವಿಶೇಷ ತನಿಖಾ ತಂಡದ ಡಿಐಜಿ ಎಂ.ಎನ್ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮಂಗಳೂರಿಗೆ ಆಗಮಿಸಿದ್ದು ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಮಂಗಳೂರಿನ ಎಸ್ಪಿ ಕಚೇರಿ ಬಳಿಯಿರುವ ಐಜಿಪಿ ಕಚೇರಿಯಲ್ಲಿ ಅನುಚೇತ್, ಜಿತೇಂದ್ರ ದಯಾಮ ಮತ್ತು ದ.ಕ. ಎಸ್ಪಿ ಡಾ.ಅರುಣ್ ಅವರು ಐಜಿಪಿ ಜೊತೆಗೆ ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಸಂಜೆ ಐದು ಗಂಟೆ ವೇಳೆಗೆ ಮಂಗಳೂರಿಗೆ ಆಗಮಿಸಿದ ಅನುಚೇತ್ ನೇರವಾಗಿ ಕದ್ರಿ ಮಲ್ಲಿಕಟ್ಟೆಯ ಸರ್ಕಾರಿ ಅತಿಥಿ ಬಂಗಲೆಯಲ್ಲಿ ಎಸ್ಐಟಿ ತಂಡದ ಇತರ ಕೆಲವು ಸದಸ್ಯರನ್ನು ಭೇಟಿಯಾಗಿ ಅಲ್ಲಿಂದ ಐಜಿ ಕಚೇರಿಗೆ ತೆರಳಿದ್ದಾರೆ.







ಐಜಿ ಕಚೇರಿಯಲ್ಲಿ ಧರ್ಮಸ್ಥಳ ಪ್ರಕರಣದ ಬಗ್ಗೆ ನಾಲ್ವರು ಐಪಿಎಸ್ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಸಭೆಯ ಬಳಿಕ ಹೊರಬಂದ ಅನುಚೇತ್ ಅವರನ್ನು ಧರ್ಮಸ್ಥಳಕ್ಕೆ ಯಾವಾಗ ಎಂದು ಪತ್ರಕರ್ತರು ಕೇಳಿದಾಗ, ನೋ ಕಮೆಂಟ್ಸ್ ಎನ್ನುತ್ತ ಕಾರು ಹತ್ತಿಕೊಂಡು ತೆರಳಿದರು. ಅದೇ ಕಾರಿನಲ್ಲಿ ಎಸ್ಪಿ ಜಿತೇಂದ್ರ ದಯಾಮ ಕೂಡ ತೆರಳಿದ್ದಾರೆ.
ಇದೇ ವೇಳೆ, ಬೆಳ್ತಂಗಡಿ ಪೊಲೀಸ್ ಠಾಣೆ ಪಕ್ಕದಲ್ಲಿ ಎಸ್ಐಟಿ ತಂಡಕ್ಕೆ ಪ್ರತ್ಯೇಕ ಕಚೇರಿ ತೆರೆಯಲಾಗಿದ್ದು ಕಂಪ್ಯೂಟರ್, ಪ್ರಿಂಟರ್ ಹಾಕಲಾಗಿದೆ. ಅಲ್ಲದೆ, ಎಸ್ಐಟಿ ತಂಡದ ಸಹಾಯವಾಣಿ ಸಂಖ್ಯೆಯನ್ನೂ ಆರಂಭಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಇನ್ನೆರಡು ದಿನದಲ್ಲಿ ತಂಡಕ್ಕೆ ನೇಮಕಗೊಂಡಿರುವ ಎಲ್ಲ ಇನ್ಸ್ ಪೆಕ್ಟರ್, ಎಸ್ಐಗಳು ಕೂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ರಿಪೋರ್ಟ್ ಮಾಡಲಿದ್ದಾರೆ.
ಧರ್ಮಸ್ಥಳ ಪ್ರಕರಣ ಭಾರೀ ಸಂಚಲನ ಎಬ್ಬಿಸಿರುವುದರಿಂದ ಸೀಮಿತ ಅವಧಿಯಲ್ಲಿ ತನಿಖೆ ಮಾಡಿ ಮುಗಿಸಲು ಪೊಲೀಸ್ ತಂಡ ಮುಂದಾಗಿರುವಂತಿದೆ. ಇಲಾಖಾ ಮಟ್ಟದಲ್ಲಿ ಅಧಿಕಾರಿಗಳಿಗೆ ಆರ್ಡರ್ ತಲುಪಿದ ಬೆನ್ನಲ್ಲೇ ತಮ್ಮ ಕೆಲಸ ಆರಂಭಿಸಲಿದ್ದಾರೆ. ಸದ್ಯಕ್ಕೆ ಇಬ್ಬರು ಎಸ್ಪಿಗಳನ್ನು ತಂಡದಲ್ಲಿ ಸೇರಿಸಲಾಗಿದ್ದು ಅವರೇ ತನಿಖೆಯ ನೇತೃತ್ವ ವಹಿಸಲಿದ್ದಾರೆ. ಅಲ್ಲದೆ, ತಂಡದ ಮುಖ್ಯಸ್ಥ ಪ್ರಣವ್ ಮೊಹಂತಿ ಕೂಡ ಇನ್ನೆರಡು ದಿನದಲ್ಲಿ ಬೆಳ್ತಂಗಡಿಗೆ ಆಗಮಿಸುವ ಸಾಧ್ಯತೆ ಇದೆ.
ಎಸ್ಐಟಿ ರಚನೆಯ ಆದೇಶದಲ್ಲಿ ತನಿಖಾ ಪ್ರಗತಿಯ ಬಗ್ಗೆ ಐಜಿಪಿ ಮತ್ತು ಡಿಜಿಪಿಗೆ ವರದಿ ನೀಡುವಂತೆ ಸೂಚಿಸಲಾಗಿತ್ತು. ಇದರಂತೆ, ಅನುಚೇತ್ ಮತ್ತು ತಂಡ ಮೊದಲಿಗೆ ಐಜಿಪಿ ಭೇಟಿ ಮಾಡಿರುವ ಸಾಧ್ಯತೆಯಿದೆ.
The investigation into the sensational Dharmasthala mass burial case has gained momentum with senior police officers holding an emergency meeting in Mangaluru on Thursday. DIG M.N. Anucheth and SP Jitendra Kumar Dayama, key members of the Special Investigation Team (SIT), arrived in the city and met with Western Range IGP Amit Singh to discuss the case.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm