ಬ್ರೇಕಿಂಗ್ ನ್ಯೂಸ್
26-07-25 04:38 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಲೇಖಕಿ ಮತ್ತು ಮಂಗಳೂರಿನಲ್ಲಿ ವೃತ್ತಿಯಲ್ಲಿ ವಕೀಲೆಯಾಗಿದ್ದ ಬಂಟ್ವಾಳ ಮೂಲದ ರಾಜಶ್ರೀ ಜೆ. ಪೂಜಾರಿ (25) ಅಪರೂಪದ ಬೆನ್ನು ಹುರಿ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಂಟ್ವಾಳದಲ್ಲಿ ಬಡ ಕುಟುಂಬದ ಹಿನ್ನೆಲೆಯ ರಾಜಶ್ರೀ ಪೂಜಾರಿ ಸಣ್ಣ ವಯಸ್ಸಿನಲ್ಲೇ ಗಮನಾರ್ಹ ಸಾಧನೆ ಮಾಡಿದ್ದರು. ಬಂಟ್ವಾಳದಲ್ಲಿ ಪ್ರಾಥಮಿಕ ಶಿಕ್ಷಣ, ಪೆರ್ಮುದೆ ಎಕ್ಕಾರಿನಲ್ಲಿ ಪ್ರೌಢಶಾಲೆ, ಕಟೀಲು ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಬಳಿಕ ಕಾನೂನು ಶಿಕ್ಷಣವನ್ನು ಮಂಗಳೂರಿನ ಎಸ್ಡಿಎಂ ಕಾಲೇಜಿನಲ್ಲಿ ಪಡೆದಿದ್ದರು. ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿಯಲ್ಲಿದ್ದರು. ಶಾಲಾ ಹಂತದಲ್ಲಿಯೇ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿ ಹಲವು ಪ್ರಶಸ್ತಿ ಗಿಟ್ಟಿಸಿಕೊಂಡಿದ್ದರು.
ನಿರೂಪಣೆ, ಕ್ವಿಜ್ ಸ್ಪರ್ಧೆಗಳನ್ನು ಏರ್ಪಡಿಸುವುದು, ತುಳು ಪರಿಷತ್ ನಲ್ಲಿ ತೊಡಗಿಸಿ ಸಾಹಿತ್ಯ, ಸಂಘಟನೆ, ಆಕಾಶವಾಣಿ ಇನ್ನಿತರ ಮಾಧ್ಯಮಗಳಲ್ಲಿ ಕವನವಾಚನ ಚರ್ಚಾ ಕೂಟಗಳಲ್ಲಿ ಭಾಗವಹಿಸಿದ್ದರು. ಫೇಸ್ಬುಕ್ ಜಾಲತಾಣದಲ್ಲಿ ಪ್ರತಿ ಶನಿವಾರ ಸಂಜೆ 5 ಗಂಟೆಗೆ ಕತೆತ ಕದಿಕೆ ಎಂಬ ಹೆಸರಿನಲ್ಲಿ ತುಳು ಕತೆ ವಾಚನ ಮಾಡುತ್ತಿದ್ದರು. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸುಮ್ಮನೆ ಕೂರಬಾರದು ಅಂತ ಯೋಚಿಸಿ ಜಾಲತಾಣದಲ್ಲಿಯೇ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ನೂರು ಸರಣಿಗಳನ್ನು ಪೂರೈಸಿದ್ದರು.
ಇಂಥ ಬಹುಮುಖ ಪ್ರತಿಭೆಯ ಯುವ ವಕೀಲೆಯಾಗಿದ್ದ ರಾಜಶ್ರೀಗೆ ಇತ್ತೀಚಿಗೆ ಬೆನ್ನುಹುರಿಯಲ್ಲಿ ಸಮಸ್ಯೆ ಎದುರಾಗಿತ್ತು. ಮಂಗಳೂರಿನ ವಕೀಲ ಜಗದೀಶ್ ಕೆ.ಆರ್ ಅವರ ಜೊತೆಗೆ ಜೂನಿಯರ್ ಆಗಿದ್ದ ಈಕೆಯನ್ನು 15 ದಿನಗಳ ಹಿಂದೆ ಯೇನಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಗೆ ನಾಲ್ಕು ಲಕ್ಷ ಆಗುತ್ತೆ, ಸಹಾಯ ಮಾಡುವಂತೆಯೂ ಜೊತೆಗಿದ್ದವರು ಕೇಳಿಕೊಂಡಿದ್ದರು. ಆದರೆ ಆಪರೇಶನ್ ಆಗಿ ಮನೆಗೆ ತೆರಳಿದ್ದ ಅವರಿಗೆ ಮತ್ತೆ ಅನಾರೋಗ್ಯ ಉಂಟಾಗಿ ಇಹಲೋಕ ತ್ಯಜಿಸಿದ್ದಾರೆ. ಎಕ್ಕಾರು ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಸೋದರ ಇದ್ದಾರೆ. ಕಲೆ, ಸಾಹಿತ್ಯ ಚಟುವಟಿಕೆಗಾಗಿ ರಾಜಶ್ರೀಗೆ ಕನ್ನಡ ಕುವರಿ, ಕನ್ನಡ ಧ್ವನಿ, ಬುಕ್ ಬ್ರಹ್ಮ ಪ್ರಶಸ್ತಿಗಳು ಸಿಕ್ಕಿದ್ದವು.
In a deeply saddening development, Rajashree Jayaraj Poojary, a promising young writer, lawyer, and cultural enthusiast, passed away following health complications. Hailing from Bantwal, Rajashree was known for her literary talent, humility, and multifaceted contributions to arts, literature, and society.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm