ಬ್ರೇಕಿಂಗ್ ನ್ಯೂಸ್
26-07-25 10:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತಿದ್ದೇನೆಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ವ್ಯಕ್ತಿಯನ್ನು ಎಸ್ಐಟಿ ತಂಡದ ಅಧಿಕಾರಿಗಳು ಮಂಗಳೂರಿನಲ್ಲಿ ಸುದೀರ್ಘ 9 ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿ ತಂಡದ ಡಿಐಜಿ ಎಂ.ಎನ್ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ವಿಚಾರಣೆ ನಡೆಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ವೇಳೆಗೆ ತನ್ನ ವಕೀಲರ ಜೊತೆಗೆ ಟ್ಯಾಕ್ಸಿ ಕಾರಿನಲ್ಲಿ ಮುಸುಕು ಹಾಕ್ಕೊಂಡಿದ್ದ ವ್ಯಕ್ತಿ ವಿಚಾರಣೆಗೆ ಬಂದಿದ್ದು, ಮುಸುಕು ಹಾಕ್ಕೊಂಡೇ ಐಬಿ ಬಂಗಲೆಯ ಒಳಗಡೆ ತೆರಳಿದ್ದಾರೆ.


ಕಟ್ಟಡದ ಹೊರಗಡೆ ಕಾದಿದ್ದ ಮಾಧ್ಯಮದವರನ್ನು ಅದಕ್ಕೂ ಮೊದಲೇ ಪೊಲೀಸರು ಐಬಿ ಬಂಗಲೆಯ ಗೇಟ್ ಹೊರಭಾಗಕ್ಕೆ ಕಳುಹಿಸಿದ್ದರು. ಹೀಗಾಗಿ ಮುಸುಕುಧಾರಿ ವ್ಯಕ್ತಿ ಕಾರಿನಲ್ಲಿ ಹೊರಗಿನಿಂದ ಒಳಗಡೆ ಹೋಗುವುದಷ್ಟೇ ಅಲ್ಲಿದ್ದ ಪತ್ರಕರ್ತರ ಕ್ಯಾಮರಾ ಕಣ್ಣಿಗೆ ಸೆರೆಯಾಗಿತ್ತು. ಆನಂತರ, ವಿಚಾರಣೆ ಮುಗಿಸಿ ಹೊರಬರುತ್ತಾರೆಂದು ಕಾದರೂ ಹೊರಗಡೆ ಬರಲಿಲ್ಲ. ಐಬಿ ಬಂಗಲೆಯ ಒಳಗೆ ಹೊರಗಿನಿಂದಲೇ ಊಟ, ತಿಂಡಿ ತರಿಸಿಕೊಂಡಿದ್ದಾರೆ.



ಸಂಜೆ 7.30ರ ವೇಳೆಗೆ ಮುಸುಕುಧಾರಿ ವ್ಯಕ್ತಿ ಮತ್ತು ಆತನ ಜೊತೆಗಿದ್ದ ವಕೀಲರು ವಿಚಾರಣೆ ಮುಗಿಸಿ ಹಿಂದಕ್ಕೆ ತೆರಳಿದ್ದಾರೆ. ಅಂದಾಜು ಸುದೀರ್ಘ 9 ಗಂಟೆ ಕಾಲ ವಿಚಾರಣೆ ನಡೆಸಿದ್ದು, ಹೆಣಗಳನ್ನು ಹೂತು ಹಾಕಿದ್ದು, ಅದಕ್ಕೆ ಕಾರಣವಾದ ಅಂಶಗಳು, ಯಾವಾಗೆಲ್ಲ ಹೆಣಗಳನ್ನು ಹೂಳಲಾಗಿತ್ತು, ಅದು ಯಾರದ್ದಿತ್ತು ಇತ್ಯಾದಿ ವಿಚಾರಗಳ ಕುರಿತು ವಿಚಾರಣೆ ವೇಳೆ ಮಾಹಿತಿಗಳನ್ನು ಸಂಗ್ರಹಿಸಿರುವ ಸಾಧ್ಯತೆಯಿದೆ. ಆದರೆ ಈ ಬಗ್ಗೆ ಜೊತೆಗಿದ್ದ ವಕೀಲರಾಗಲೀ, ಪೊಲೀಸ್ ಅಧಿಕಾರಿಗಳಾಗಲೀ ಮಾಹಿತಿ ಬಿಟ್ಟುಕೊಟ್ಟಿಲ್ಲ. ಶುಕ್ರವಾರ ರಾತ್ರಿ ಧರ್ಮಸ್ಥಳ ಠಾಣೆಗೆ ತೆರಳಿದ್ದ ಎಸ್ಪಿ ಜಿತೇಂದ್ರ ದಯಾಮ ಅವರು ಪ್ರಕರಣ ಕುರಿತ ಫೈಲ್ ಗಳನ್ನು ಪಡೆದಿದ್ದು, ರಾತ್ರಿಯೇ ಅಲ್ಲಿಂದ ತೆರಳಿದ್ದರು. ಈ ನಡುವೆ, ಎಸ್ಐಟಿ ತಂಡಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆ ಪಕ್ಕದಲ್ಲಿ ಕಚೇರಿ ತೆರೆದಿದ್ದು ಅದಿನ್ನೂ ಆರಂಭವಾಗಿಲ್ಲ.
The man who recently triggered a sensation by claiming to have buried hundreds of bodies in Dharmasthala was subjected to an intense 9-hour interrogation by the Special Investigation Team (SIT) in Mangaluru on Saturday. The questioning took place at the IB Guest House in Mallikatte, where DIG M.N. Anucheth and SP Jitendra Dayama of the SIT conducted the probe
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm