ಬ್ರೇಕಿಂಗ್ ನ್ಯೂಸ್
26-07-25 10:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತಿದ್ದೇನೆಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ವ್ಯಕ್ತಿಯನ್ನು ಎಸ್ಐಟಿ ತಂಡದ ಅಧಿಕಾರಿಗಳು ಮಂಗಳೂರಿನಲ್ಲಿ ಸುದೀರ್ಘ 9 ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿ ತಂಡದ ಡಿಐಜಿ ಎಂ.ಎನ್ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ವಿಚಾರಣೆ ನಡೆಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ವೇಳೆಗೆ ತನ್ನ ವಕೀಲರ ಜೊತೆಗೆ ಟ್ಯಾಕ್ಸಿ ಕಾರಿನಲ್ಲಿ ಮುಸುಕು ಹಾಕ್ಕೊಂಡಿದ್ದ ವ್ಯಕ್ತಿ ವಿಚಾರಣೆಗೆ ಬಂದಿದ್ದು, ಮುಸುಕು ಹಾಕ್ಕೊಂಡೇ ಐಬಿ ಬಂಗಲೆಯ ಒಳಗಡೆ ತೆರಳಿದ್ದಾರೆ.


ಕಟ್ಟಡದ ಹೊರಗಡೆ ಕಾದಿದ್ದ ಮಾಧ್ಯಮದವರನ್ನು ಅದಕ್ಕೂ ಮೊದಲೇ ಪೊಲೀಸರು ಐಬಿ ಬಂಗಲೆಯ ಗೇಟ್ ಹೊರಭಾಗಕ್ಕೆ ಕಳುಹಿಸಿದ್ದರು. ಹೀಗಾಗಿ ಮುಸುಕುಧಾರಿ ವ್ಯಕ್ತಿ ಕಾರಿನಲ್ಲಿ ಹೊರಗಿನಿಂದ ಒಳಗಡೆ ಹೋಗುವುದಷ್ಟೇ ಅಲ್ಲಿದ್ದ ಪತ್ರಕರ್ತರ ಕ್ಯಾಮರಾ ಕಣ್ಣಿಗೆ ಸೆರೆಯಾಗಿತ್ತು. ಆನಂತರ, ವಿಚಾರಣೆ ಮುಗಿಸಿ ಹೊರಬರುತ್ತಾರೆಂದು ಕಾದರೂ ಹೊರಗಡೆ ಬರಲಿಲ್ಲ. ಐಬಿ ಬಂಗಲೆಯ ಒಳಗೆ ಹೊರಗಿನಿಂದಲೇ ಊಟ, ತಿಂಡಿ ತರಿಸಿಕೊಂಡಿದ್ದಾರೆ.



ಸಂಜೆ 7.30ರ ವೇಳೆಗೆ ಮುಸುಕುಧಾರಿ ವ್ಯಕ್ತಿ ಮತ್ತು ಆತನ ಜೊತೆಗಿದ್ದ ವಕೀಲರು ವಿಚಾರಣೆ ಮುಗಿಸಿ ಹಿಂದಕ್ಕೆ ತೆರಳಿದ್ದಾರೆ. ಅಂದಾಜು ಸುದೀರ್ಘ 9 ಗಂಟೆ ಕಾಲ ವಿಚಾರಣೆ ನಡೆಸಿದ್ದು, ಹೆಣಗಳನ್ನು ಹೂತು ಹಾಕಿದ್ದು, ಅದಕ್ಕೆ ಕಾರಣವಾದ ಅಂಶಗಳು, ಯಾವಾಗೆಲ್ಲ ಹೆಣಗಳನ್ನು ಹೂಳಲಾಗಿತ್ತು, ಅದು ಯಾರದ್ದಿತ್ತು ಇತ್ಯಾದಿ ವಿಚಾರಗಳ ಕುರಿತು ವಿಚಾರಣೆ ವೇಳೆ ಮಾಹಿತಿಗಳನ್ನು ಸಂಗ್ರಹಿಸಿರುವ ಸಾಧ್ಯತೆಯಿದೆ. ಆದರೆ ಈ ಬಗ್ಗೆ ಜೊತೆಗಿದ್ದ ವಕೀಲರಾಗಲೀ, ಪೊಲೀಸ್ ಅಧಿಕಾರಿಗಳಾಗಲೀ ಮಾಹಿತಿ ಬಿಟ್ಟುಕೊಟ್ಟಿಲ್ಲ. ಶುಕ್ರವಾರ ರಾತ್ರಿ ಧರ್ಮಸ್ಥಳ ಠಾಣೆಗೆ ತೆರಳಿದ್ದ ಎಸ್ಪಿ ಜಿತೇಂದ್ರ ದಯಾಮ ಅವರು ಪ್ರಕರಣ ಕುರಿತ ಫೈಲ್ ಗಳನ್ನು ಪಡೆದಿದ್ದು, ರಾತ್ರಿಯೇ ಅಲ್ಲಿಂದ ತೆರಳಿದ್ದರು. ಈ ನಡುವೆ, ಎಸ್ಐಟಿ ತಂಡಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆ ಪಕ್ಕದಲ್ಲಿ ಕಚೇರಿ ತೆರೆದಿದ್ದು ಅದಿನ್ನೂ ಆರಂಭವಾಗಿಲ್ಲ.
The man who recently triggered a sensation by claiming to have buried hundreds of bodies in Dharmasthala was subjected to an intense 9-hour interrogation by the Special Investigation Team (SIT) in Mangaluru on Saturday. The questioning took place at the IB Guest House in Mallikatte, where DIG M.N. Anucheth and SP Jitendra Dayama of the SIT conducted the probe
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm