ಬ್ರೇಕಿಂಗ್ ನ್ಯೂಸ್
26-07-25 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕವನ್ನು ಸಂಘಟನೆ ದೃಷ್ಟಿಯಿಂದ ನಗರ ಮತ್ತು ಗ್ರಾಮಾಂತರ ಎಂದು ವಿಭಜಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಘಟಕವನ್ನು ಎರಡಾಗಿ ವಿಭಜಿಸುವ ಬಗ್ಗೆ ಕೆಪಿಸಿಸಿಗೆ ಪ್ರಸ್ತಾವನೆ ಹೋಗಿದ್ದು, ಇನ್ನೂ ಅಲ್ಲಿಂದ ಅನುಮತಿ ಸಿಕ್ಕಿಲ್ಲ. ಈ ಕುರಿತು ಕೆಪಿಸಿಸಿ ಮಟ್ಟದಲ್ಲಿ ಚರ್ಚೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಈಗಾಗಲೇ ಮಹಿಳಾ ಕಾಂಗ್ರೆಸ್ ಘಟಕವನ್ನು ಎರಡಾಗಿ ವಿಭಜಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ನಗರ ಮತ್ತು ಗ್ರಾಮಾಂತರ ಘಟಕಗಳೆಂದು ವಿಭಜಿಸಲಾಗಿದೆ. ನಗರ ಘಟಕವು ಮಂಗಳೂರು ಉತ್ತರ, ದಕ್ಷಿಣ, ಉಳ್ಳಾಲ ಹಾಗೂ ಮೂಡುಬಿದಿರೆ ಕ್ಷೇತ್ರಗಳನ್ನು ಒಳಗೊಂಡಿದೆ. ಗ್ರಾಮಾಂತರ ಘಟಕದಲ್ಲಿ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಕ್ಷೇತ್ರಗಳಿವೆ. ಜಿಲ್ಲೆ ತುಂಬ ವಿಸ್ತಾರ ಆಗಿರುವುದರಿಂದ ಅಧ್ಯಕ್ಷರು ಇತರ ಪದಾಧಿಕಾರಿಗಳು ಎಲ್ಲ ಕಡೆ ತೆರಳುವುದಕ್ಕೆ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ವಿಭಜಿಸಲಾಗಿದೆ. ನಗರ ಘಟಕಕ್ಕೆ ಮಾಜಿ ಕಾರ್ಪೊರೇಟರ್ ಅಪ್ಪಿ ಎಸ್ ಅಧ್ಯಕ್ಷರಾದರೆ, ಗ್ರಾಮಾಂತರ ಘಟಕಕ್ಕೆ ಉಷಾ ಅಂಚನ್ ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ರೀತಿ ಪಕ್ಷದ ಎಲ್ಲ ಘಟಕಗಳೂ ಎರಡಾಗಿ ವಿಭಜನೆಗೊಳ್ಳಲಿದೆ, ಪಕ್ಷದ ಕಾರ್ಯಕರ್ತರಿಗೂ ಹೆಚ್ಚಿನ ಅವಕಾಶ ಸಿಗುವುದು ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಘಟಕದ ವಿಭಜನೆಗೆ ಇನ್ನೂ ಕೆಪಿಸಿಸಿ ಕಡೆಯಿಂದ ಸೂಚನೆ ಬಂದಿಲ್ಲ. ಅಂತಹ ಪ್ರಸ್ತಾಪ ಮಾತ್ರ ಇದೆ ಎಂದು ಹರೀಶ್ ಕುಮಾರ್ ಹೇಳಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ತುರುಸಿನ ಸ್ಪರ್ಧೆ
ಜಿಲ್ಲಾ ಕಾಂಗ್ರೆಸ್ ಘಟಕ ವಿಭಜನೆಯಾದರೆ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಬಗ್ಗೆ ಈಗಾಗಲೇ ಲಾಬಿ ಶುರುವಾಗಿದೆ. ನಗರ ಘಟಕದಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದ ಪದ್ಮರಾಜ್ ಪೂಜಾರಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಶಶಿಧರ ಹೆಗ್ಡೆ, ಐವಾನ್ ಡಿಸೋಜ, ಮಿಥುನ್ ರೈ ಹೆಸರೂ ಚಾಲ್ತಿಯಲ್ಲಿದೆ. ಎರಡು ಘಟಕಗಳಾದರೆ ಒಂದು ಕಡೆ ಬಿಲ್ಲವ, ಇನ್ನೊಂದು ಕಡೆ ಬಂಟ್ ಅಥವಾ ಗೌಡ ಜನಾಂಗದವರು ಅಧ್ಯಕ್ಷರಾಗುವ ಸಾಧ್ಯತೆಯಿದೆ.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕಳೆದ ಎಂಟು ವರ್ಷಗಳಿಂದ ಅಧ್ಯಕ್ಷ ಸ್ಥಾನದಲ್ಲಿದ್ದು, ಅವರ ಅವಧಿ ಎರಡು ವರ್ಷಗಳ ಹಿಂದೆಯೇ ಮುಗಿದಿತ್ತು. ಆದರೂ ಚುನಾವಣೆ ಇನ್ನಿತರ ಕಾರಣಕ್ಕೆ ಅವರನ್ನೇ ಎರಡು ಅವಧಿ ಬಳಿಕವೂ ಮುಂದುವರಿಸಲಾಗಿತ್ತು. ಇದೀಗ ಬೆಂಗಳೂರು, ಬೆಳಗಾವಿ ಮಾದರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕವನ್ನು ವಿಭಜಿಸಿ ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಸಂಘಟಿಸಲು ತಂತ್ರಗಾರಿಕೆ ನಡೆದಿದೆ.
The Dakshina Kannada District Congress unit is moving toward a strategic organizational split into urban and rural segments. While a formal proposal has been sent to the Karnataka Pradesh Congress Committee (KPCC), official approval is still awaited. District Congress President Harish Kumar confirmed during a press conference that discussions regarding the division are ongoing at the KPCC level.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm