ಬ್ರೇಕಿಂಗ್ ನ್ಯೂಸ್
27-07-25 07:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣದ ನ್ಯಾಯಯುತ ತನಿಖೆ ನಡೆಯಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸಮ್ಮೇಳನ ಆಗ್ರಹಿಸಿತು.
ನಗರದಲ್ಲಿ ಭಾನುವಾರ ನಡೆದ ಸಮ್ಮೇಳನದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಈಶ್ವರಿ ಬಳ್ಳುಂಜ ನಿರ್ಣಯ ಮಂಡಿಸಿದರು. ಅಧ್ಯಕ್ಷೆ ಜಯಂತಿ ಬಿ.ಶೆಟ್ಟಿ ಅನುಮೋದಿಸಿದರು. ಸಭಿಕರು ಚಪ್ಪಾಳೆ ತಟ್ಟಿ ನಿರ್ಣಯವನ್ನು ಬೆಂಬಲಿಸಿದರು.
'ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾದ ಹಲವಾರು ಅಪರಿಚಿತ ಹೆಣ್ಣುಮಕ್ಕಳ ಜರ್ಜೆರಿತ ಮೃತದೇಹಗಳನ್ನು ನನ್ನಿಂದ ಬಲವಂತವಾಗಿ ಮಣ್ಣು ಮಾಡಿಸಿದ್ದಾರೆ' ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿದ್ದುದಾಗಿ ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಹೇಳಿದ ನಂತರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಹೆಣ್ಣುಮಕ್ಕಳ ಅಸಹಜ ಸಾವು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ' ಎಂದು ನಿರ್ಣಯದಲ್ಲಿ ಹೇಳಲಾಗಿದೆ.
'ಸಾರ್ವಜನಿಕರ ಒತ್ತಡದ ನಂತರ ಧರ್ಮಸ್ಥಳ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಆಗಿದೆ. ಇದರಿಂದ ಜನರಲ್ಲಿ ಆಶಾಭಾವ ಮೂಡಿದೆ. ಆದರೆ ಆಡಳಿತ ಮತ್ತು ವಿರೋಧ ಪಕ್ಷಗಳು ಪ್ರಕರಣದ ಕುರಿತು ವ್ಯಕ್ತಪಡಿಸುತ್ತಿರುವ ನಿಲುವುಗಳನ್ನು ಗಮನಿಸಿದರೆ ನಿಷ್ಪಕ್ಷಪಾತ ತನಿಖೆ ನಡೆಯುವ ಬಗ್ಗೆ ಆತಂಕ ಸಂದೇಹ ಮೂಡಿದೆ' ಎಂಬ ಅಭಿಪ್ರಾಯ ನಿರ್ಣಯದಲ್ಲಿ ವ್ಯಕ್ತವಾಯಿತು.
ಜನರಲ್ಲಿ ಮೂಡಿರುವ ಆತಂಕಗಳನ್ನು ಗಮನಿಸಿ ಸರ್ಕಾರ ವಿಶೇಷ ತಂಡಕ್ಕೆ ಮುಕ್ತ ಅವಕಾಶ ನೀಡಿ, ನ್ಯಾಯಯುತ ತನಿಖೆ ನಡೆಯುವುದಾಗಿ ಖಾತರಿಪಡಿಸಬೇಕು. ಸಾಕ್ಷಿ ಮತ್ತು ಅವರ ಪರವಾದ ವಕೀಲರಿಗೆ ಗರಿಷ್ಠ ಭದ್ರತೆ ಒದಗಿಸಬೇಕು. ಹೆಣ ಹೂತುಹಾಕಲಾಗಿದೆ ಎಂಬ ಪ್ರಕರಣಕ್ಕೆ ಮಾತ್ರ ತನಿಖೆಯನ್ನು ಸೀಮಿತಗೊಳೊಸದೆ 80ರ ದಶಕದಲ್ಲಿ ಅಪಹರಣಕ್ಕೆ ಒಳಗಾಗಿ ಕೊಲೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ, ಪತ್ತೆಹಚ್ಚಲಾಗದ ಪ್ರಕರಣ ಎಂದು ಷರಾ ಬರೆದಿರುವ ವಿದ್ಯಾರ್ಥಿನಿ ಪದ್ಮಲತಾ, ಸೌಜನ್ಯಾ ಪ್ರಕರಣ, ಮಾವುತ ನಾರಾಯಣ ಅವರ ಸಹೋದರಿ ಯಮುನಾ ಕೊಲೆ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸಬೇಕು' ಎಂದು ನಿರ್ಣಯದಲ್ಲಿ ಆಗ್ರಹಿಸಲಾಯಿತು.
A renewed demand for a thorough reinvestigation into a series of mysterious and unnatural deaths of women in Dharmasthala village—including those of Padmalatha, Vedavalli, Sowjanya, and Yamuna—has been voiced by the All India Democratic Women’s Association (AIDWA). The organization has urged the government to ensure a transparent probe by the newly formed Special Investigation Team (SIT).
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm