ಬ್ರೇಕಿಂಗ್ ನ್ಯೂಸ್
27-07-25 08:56 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಹತ್ತು ವರ್ಷಗಳ ಹಿಂದೆ ಮಂಗಳೂರಿನ ಬಿಜೈನಲ್ಲಿ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸೂಚನೆಯಂತೆ ಶೂಟೌಟ್ ಮಾಡಿದ್ದ ಪ್ರಕರಣದಲ್ಲಿ ಶಾರ್ಪ್ ಶೂಟರ್ ಮಹಾರಾಷ್ಟ್ರ ಮೂಲದ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಿಜೈ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು ನಡೆಸಿದ ಶೂಟ್ಔಟ್ ಗೆ ಸಂಬಂಧಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ 23/2014, ಕಲಂ: 447,120(b) 307 IPC & 27 Arms Act ನಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ಆರೋಪಿಯಾಗಿದ್ದ, ಮಹಾರಾಷ್ಟ್ರ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ನ್ಯಾಯಾಲಯಕ್ಕೆ ಹಾಜರಾಗದೆ 2015ರಿಂದ ತಲೆ ಮರೆಸಿಕೊಂಡಿದ್ದ.
ಆರೋಪಿ ವಿರುದ್ದ ಮಂಗಳೂರಿನ ಜೆಎಂಎಫ್ ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆರೋಪಿಯನ್ನು ಮಹಾರಾಷ್ಟ್ರದ ಪಂಢರಾಪುರ ಎಂಬಲ್ಲಿಂದ ಉರ್ವಾ ಪೊಲೀಸ್ ಠಾಣಾ ನಿರೀಕ್ಷಕರ ತಂಡ ಎಎಸ್ಐ ವೇಣುಗೋಪಾಲ್, ಸಿಬ್ಬಂದಿಗಳಾದ ಹೆಚ್ ಸಿ ಪ್ರಮೋದ್, ಹೆಚ್ ಸಿ ನಾರಾಯಣ, ಹೆಚ್ ಸಿ ಗೋವಿಂದರಾಜ್ ಅವರು ದಸ್ತಗಿರಿ ಮಾಡಿದ್ದು ಜುಲೈ 27ರಂದು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ 44/2014 ಕಲಂ: 448, 507, 120(ಬಿ) ಜೊತೆಗೆ 34 IPC ಪ್ರಕರಣವಿದ್ದು, ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಮಹಾರಾಷ್ಟ್ರ ರಾಜ್ಯದ ಸತಾರ ಜಿಲ್ಲೆಯ ಕರಾಡ್ ನಗರದಲ್ಲಿಯೂ ಆರ್ಮ್ಸ್ ಆ್ಯಕ್ಟ್ ಪ್ರಕರಣ ಇರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
In a major breakthrough, Mangaluru police have arrested a sharp shooter from Maharashtra in connection with a decade-old shootout case at the Bharathi Builders office in Bejai, allegedly carried out on the instructions of underworld gangster Ravi Pujari. The accused, identified as Ganesh Lakshman Sakat from Karad, Maharashtra, had been absconding since 2015. He was wanted in the 2014 shootout case registered at Urwa Police Station under IPC sections 447, 120(b), 307, and Section 27 of the Arms Act (Case No. 23/2014).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm