ಬ್ರೇಕಿಂಗ್ ನ್ಯೂಸ್
27-07-25 08:56 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಹತ್ತು ವರ್ಷಗಳ ಹಿಂದೆ ಮಂಗಳೂರಿನ ಬಿಜೈನಲ್ಲಿ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸೂಚನೆಯಂತೆ ಶೂಟೌಟ್ ಮಾಡಿದ್ದ ಪ್ರಕರಣದಲ್ಲಿ ಶಾರ್ಪ್ ಶೂಟರ್ ಮಹಾರಾಷ್ಟ್ರ ಮೂಲದ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಿಜೈ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು ನಡೆಸಿದ ಶೂಟ್ಔಟ್ ಗೆ ಸಂಬಂಧಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ 23/2014, ಕಲಂ: 447,120(b) 307 IPC & 27 Arms Act ನಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ಆರೋಪಿಯಾಗಿದ್ದ, ಮಹಾರಾಷ್ಟ್ರ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ನ್ಯಾಯಾಲಯಕ್ಕೆ ಹಾಜರಾಗದೆ 2015ರಿಂದ ತಲೆ ಮರೆಸಿಕೊಂಡಿದ್ದ.
ಆರೋಪಿ ವಿರುದ್ದ ಮಂಗಳೂರಿನ ಜೆಎಂಎಫ್ ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆರೋಪಿಯನ್ನು ಮಹಾರಾಷ್ಟ್ರದ ಪಂಢರಾಪುರ ಎಂಬಲ್ಲಿಂದ ಉರ್ವಾ ಪೊಲೀಸ್ ಠಾಣಾ ನಿರೀಕ್ಷಕರ ತಂಡ ಎಎಸ್ಐ ವೇಣುಗೋಪಾಲ್, ಸಿಬ್ಬಂದಿಗಳಾದ ಹೆಚ್ ಸಿ ಪ್ರಮೋದ್, ಹೆಚ್ ಸಿ ನಾರಾಯಣ, ಹೆಚ್ ಸಿ ಗೋವಿಂದರಾಜ್ ಅವರು ದಸ್ತಗಿರಿ ಮಾಡಿದ್ದು ಜುಲೈ 27ರಂದು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ 44/2014 ಕಲಂ: 448, 507, 120(ಬಿ) ಜೊತೆಗೆ 34 IPC ಪ್ರಕರಣವಿದ್ದು, ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಮಹಾರಾಷ್ಟ್ರ ರಾಜ್ಯದ ಸತಾರ ಜಿಲ್ಲೆಯ ಕರಾಡ್ ನಗರದಲ್ಲಿಯೂ ಆರ್ಮ್ಸ್ ಆ್ಯಕ್ಟ್ ಪ್ರಕರಣ ಇರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
In a major breakthrough, Mangaluru police have arrested a sharp shooter from Maharashtra in connection with a decade-old shootout case at the Bharathi Builders office in Bejai, allegedly carried out on the instructions of underworld gangster Ravi Pujari. The accused, identified as Ganesh Lakshman Sakat from Karad, Maharashtra, had been absconding since 2015. He was wanted in the 2014 shootout case registered at Urwa Police Station under IPC sections 447, 120(b), 307, and Section 27 of the Arms Act (Case No. 23/2014).
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm