ಬ್ರೇಕಿಂಗ್ ನ್ಯೂಸ್
28-07-25 10:51 am Mangalore Correspondent ಕರಾವಳಿ
ಸುಳ್ಯ, ಜುಲೈ 28 : ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಜುಲೈ 27ರಂದು ಬೀಸಿದ ಭಾರೀ ಗಾಳಿ ಮಳೆಯಿಂದ ವೃದ್ದೆಯೊಬ್ಬರ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಮೃತರನ್ನು ದಿ. ಗೋಪಾಲ ಭಂಡಾರಿ ಅವರ ಪತ್ನಿ ರುಕ್ಮಿಣಿ (62) ಎಂದು ಗುರುತ್ತಿಸಲಾಗಿದೆ. ರುಕ್ಮಿಣಿ ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಮುಂಜಾನೆ ಮನೆಯ ಹೊರಗಡೆ ಕೆಲಸ ನಿರತರಾಗಿದ್ದಾಗ ಬಲವಾದ ಗಾಳಿ ಮತ್ತು ಮಳೆಯಿಂದಾಗಿ ಮನೆ ಸಮೀಪದ ಮರದ ಒಂದು ಭಾಗ (ಗೆಲ್ಲು) ತುಂಡಾಗಿ ಅವರ ಮೇಲೆ ಬಿದ್ದಿದೆ. ಪರಿಣಾಮವಾಗಿ ರುಕ್ಮಿಣಿಯವರು ಮರದಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಘಟನೆಯ ವಿಚಾರ ತಿಳಿದು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹಲವು ಕಡೆಗಳಲ್ಲಿ ಅಪಾರ ಹಾನಿ:
ಸುಳ್ಯ ತಾಲೂಕಿನಾದ್ಯಂತ ಭಾರಿ ಗಾಳಿ-ಮಳೆಗೆ ಮೆಸ್ಕಾಂಗೆ ಅಪಾರ ನಷ್ಟ ಸಂಭವಿಸಿದೆ. ತಾಲೂಕಿನ ವಿವಿಧೆಡೆ ಮರ ಬಿದ್ದು ನೂರಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ವಿದ್ಯುತ್ ಪೂರೈಕೆಯಲ್ಲಿ ವ್ಯಾಪಕ ವ್ಯತ್ಯಯ ಉಂಟಾಗಿದೆ. ಮರ, ಮರದ ಗೆಲ್ಲು ಬಿದ್ದ ಪರಿಣಾಮ ಸುಮಾರು 30 ಹೆಚ್.ಟಿ. ಕಂಬಗಳು, 75ರಷ್ಟು ಎಲ್.ಟಿ. ಕಂಬಗಳು ಸೇರಿದಂತೆ ಒಟ್ಟು 105 ವಿದ್ಯುತ್ ಕಂಬಗಳು ಹಾಗೂ 3 ವಿದ್ಯುತ್ ಪರಿವರ್ತಕಗಳು ಹಾನಿಗೊಂಡಿದೆ.
ಉರುಳುತ್ತಿವೆ ಮರಗಳು:
ಮೆಸ್ಕಾಂ ವತಿಯಿಂದ ವಿದ್ಯುತ್ ಲೈನ್ ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಗಾಳಿಮಳೆಗೆ ನಡುಗಲ್ಲು- ಹರಿಹರ ರಸ್ತೆಯ ಕೊರಂಬಟ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತಡೆ ಉಂಟಾಯಿತು. ನಾಲ್ಕೂರು ಗ್ರಾಮದ ಹಾಲೆಮಜಲು, ಹುಲ್ಲುಕುಮೇರಿ, ಚಿಡ್ಕ ದೇರಪ್ಪಜ್ಜನಮನೆ, ಹೊಸಹಳ್ಳಿ ಪ್ರದೇಶಗಳಲ್ಲಿ ಭಾರಿ ಗಾಳಿ - ಮಳೆಗೆ ಮರ ಬಿದ್ದು ಹಾಗೂ ಗಾಳಿಗೆ ಅಡಿಕೆ ಮರಗಳು ಧರೆಗುರುಳಿ ನಷ್ಟ ಸಂಭವಿಸಿದೆ.
ತುಂಬಿ ಹರಿಯುತ್ತಿದೆ ಪಯಸ್ವಿನಿ,ಕುಮಾರಧಾರಾ:
ಅಮರಪಡ್ನೂರು ಗ್ರಾಮದ ಮೂಡೆಕಲ್ಲು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ರಸ್ತೆ ತಡೆ ಉಂಟಾಯಿತು. ಸುಳ್ಯದ ಪಯಸ್ವಿನಿ, ಬೆಳ್ಳಾರೆಯ ಗೌರಿ ಹೊಳೆಗಳು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಸೇರಿದಂತೆ ತೋಡು, ಹಳ್ಳಗಳು ತುಂಬಿ ಹರಿಯುತ್ತಿದೆ. ಸುಳ್ಯ ನಗರ, ಬೆಳ್ಳಾರೆ, ನಿಂತಿಕಲ್ಲು ಗುತ್ತಿಗಾರು, ಜಾಲ್ಲೂರು, ಸಂಪಾಜೆ, ಕೊಲ್ಲಮೊಗ್ರು ಭಾಗಗಳಲ್ಲೂ ಧಾರಾಕಾರ ಮಳೆ ಮುಂದುವರಿದಿದೆ.
ಮನೆ ಮೇಲೆ ಬಿದ್ದ ಸಾಗುವಾನಿ ಮರ:
ಮೆಟ್ಟಿನಡ್ಕ ಎಂಬಲ್ಲಿ ಮನೆಗೆ ಮರ ಬಿದ್ದು ಮನೆ ಬಹುತೇಕ ಧ್ವಂಸವಾಗಿದೆ. ನಾಲ್ಕೂರು ಗ್ರಾಮದ ಅಮೆ ಮನೆ ಸುಧೀರ್ ಅವರ ಮನೆಗೆ ಸಾಗುವಾನಿ ಮರ ಬಿದ್ದು ಮನೆ ಸಂಪೂರ್ಣ ಧ್ವಂಸಗೊಂಡಿರುತ್ತದೆ. ಮನೆಯಲ್ಲಿದ್ದ ಅವರ ಸಹೋದರ ಕುಶಾಲಪ್ಪ ಅವರ ಹಣೆಯ ಭಾಗಕ್ಕೆ ಮತ್ತು ತುಟಿಗೆ ಗಾಯವಾಗಿದ್ದು ಇನುಳಿದಂತೆ ಇತರ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
A severe thunderstorm accompanied by strong winds in Sullia taluk caused widespread damage on July 27, including the tragic death of an elderly woman in the village of Chathrappadi, Nalakooru.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm