ಬ್ರೇಕಿಂಗ್ ನ್ಯೂಸ್
29-07-25 02:20 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 29 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ನಿರ್ಣಾಯಕ ಹಂತಕ್ಕೆ ಬಂದಿದ್ದು ದೂರುದಾರ ವ್ಯಕ್ತಿ ತೋರಿಸಿದ ಸಮಾಧಿ ಸ್ಥಳಗಳಲ್ಲಿ ಪೊಲೀಸರು ಅಗೆಯುವ ಕೆಲಸ ಆರಂಭಿಸಿದ್ದಾರೆ. ಎಸ್ಐಟಿ ಅಧಿಕಾರಿಗಳ ಸೂಚನೆಯಂತೆ, ಅಗೆಯುವ ಕೆಲಸಕ್ಕಾಗಿ 13 ಮಂದಿ ಕಾರ್ಮಿಕರನ್ನು ಧರ್ಮಸ್ಥಳ ಪಂಚಾಯತ್ ನಿಯೋಜಿಸಿದೆ. ಇಂದು ಬೆಳಗ್ಗೆ ಪೊಲೀಸರ ಜೊತೆಗೆ ಕಾರ್ಮಿಕರು ಹಾರೆ, ಕತ್ತಿಗಳನ್ನು ಹಿಡಿದು ಸ್ಥಳಕ್ಕೆ ಬಂದಿದ್ದಾರೆ.
ನಿನ್ನೆಯಷ್ಟೇ ದೂರುದಾರ ವ್ಯಕ್ತಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಹೆಣ ಹೂಳಲಾಗಿದೆ ಎಂದಿರುವ 13 ಸ್ಥಳಗಳನ್ನು ಗುರುತಿಸಿದ್ದು ಅಲ್ಲಿಗೆ ಮಾರ್ಕ್ ಹಾಕಿದ್ದ ಅಧಿಕಾರಿಗಳು ರಾತ್ರಿ ವೇಳೆ ಕಾವಲಿಗೆ ಎಎನ್ಎಫ್ ಪೊಲೀಸರನ್ನು ನಿಯೋಜಿಸಿದ್ದರು. ಇಂದು ಆ ಸ್ಥಳಗಳನ್ನು ಅಗೆಯಲು ಆರಂಭಿಸಿದ್ದು ಈ ವೇಳೆ ನಿಯಮದಂತೆ ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ಮೇರಿಸ್, ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ, ಎಫ್ಎಸ್ಎಲ್ ತಜ್ಞರು, ಮಂಗಳೂರಿನ ಕೆಎಂಸಿ ವೈದ್ಯರು ಕೂಡ ಆಗಮಿಸಿದ್ದಾರೆ.






ಮಾರ್ಕ್ ಹಾಕಿರುವ ಜಾಗದಲ್ಲಿ ಅಗೆದು ಅಲ್ಲಿ ಮಾನವ ಅವಶೇಷಗಳ ಮಾದರಿಯನ್ನು ಪತ್ತೆ ಮಾಡಲಿದ್ದಾರೆ. ಸದ್ಯಕ್ಕೆ ಆರು ಅಡಿಗಳಷ್ಟು ಆಳಕ್ಕೆ ಅಗೆಯಲು ಪೊಲೀಸರು ನಿರ್ಧರಿಸಿದ್ದಾರೆ. ದೂರುದಾರ ವ್ಯಕ್ತಿಯೇ ಹೆಣ ಹೂತಿದ್ದಾನೆ ಎಂದಿರುವುದರಿಂದ ಮತ್ತಷ್ಟು ಆಳ ಅಗತ್ಯವಿದೆಯೇ ಎನ್ನುವ ಬಗ್ಗೆ ಆತನ ಹೇಳಿಕೆ ಆಧರಿಸಿ ನಿರ್ಧಾರ ಆಗಲಿದೆ.
ಎಸ್ಐಟಿ ತಂಡದ ಎಸ್ಪಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸ್ಥಳ ತನಿಖೆ ಸಾಗಿದೆ. ಸದ್ಯಕ್ಕೆ ಗುರುತು ಹಾಕಿರುವ 13 ಸ್ಥಳಗಳು ಅರಣ್ಯ ವ್ಯಾಪ್ತಿಗೆ ಸೇರಿದ್ದು ಅರಣ್ಯ ಇಲಾಖೆ ಅಧಿಕಾರಿಗಳು, ಕಂದಾಯ ವಿಭಾಗದ ಅಧಿಕಾರಿಗಳೂ ಸ್ಥಳದಲ್ಲಿದ್ದಾರೆ. ಸಮಾಧಿ ಅಗೆದ ಸ್ಥಳದಲ್ಲಿ ಯಾವುದೇ ಎಲುಬು, ಇನ್ನಿತರ ಅವಶೇಷ ಸಿಕ್ಕಿದರೂ ಅದನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.
ಅಗೆಯುವ ಸ್ಥಳಗಳು ದಟ್ಟ ಕಾಡಿನ ಒಳಗಿರುವುದರಿಂದ ಆ ಜಾಗಕ್ಕೆ ಮಾಧ್ಯಮ ಮತ್ತು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೂರುದಾರ ವ್ಯಕ್ತಿ ಮತ್ತು ಅವರ ವಕೀಲರು ಜೊತೆಗಿದ್ದಾರೆ. ಸೂಚಿತ ಸಮಾಧಿ ಪ್ರದೇಶದಲ್ಲಿ ಏನು ಸಿಗುತ್ತದೆ ಎನ್ನುವ ವಿಚಾರ ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
The mysterious human burial case near Dharmasthala has reached a crucial stage, with police commencing excavation work at locations identified by the complainant. Acting on the directions of the Special Investigation Team (SIT), the Dharmasthala Gram Panchayat has deployed 13 workers for the digging operation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm