ಬ್ರೇಕಿಂಗ್ ನ್ಯೂಸ್
02-08-25 02:31 pm Mangaluru Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ತೀವ್ರ ಸಂಚಲನ ಎಬ್ಬಿಸಿರುವಾಗಲೇ ದೂರುದಾರ ವ್ಯಕ್ತಿಯನ್ನು ಎಸ್ಐಟಿ ತಂಡದ ಇನ್ಸ್ ಪೆಕ್ಟರ್ ಮಂಜುನಾಥ ಗೌಡ, ದೂರು ಹಿಂಪಡೆಯುವಂತೆ ಬೆದರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದು, ಅದರ ಪ್ರತಿಯನ್ನು ಮಾಧ್ಯಮಕ್ಕೆ ಹಂಚಿಕೊಂಡಿದೆ.
ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲಿ ಆಗಸ್ಟ್ 1ರಂದು ರಾತ್ರಿ ದೂರುದಾರ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾಗ ಇನ್ಸ್ ಪೆಕ್ಟರ್ ಮಂಜುನಾಥ ಗೌಡ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯಿಂದ ಹೇಳಿಕೆ ಪಡೆಯುವಾಗ ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದು, ಈ ವೇಳೆ ಇಷ್ಟೆಲ್ಲ ಕರಾಮತ್ತು ಮಾಡೋ ಬದಲು ದೂರು ಹಿಂಪಡೆಯಬಹುದಲ್ವಾ.. ಏನೂ ಸಿಗದಿದ್ದರೆ ನೋಡೋಣ. ಒದ್ದು ಜೈಲಿಗೆ ಹಾಕಿಸುತ್ತೇನೆ ಎಂದು ಬೆದರಿಸಿದ್ದಾರೆ ಎಂಬುದಾಗಿ ದೂರುದಾರ ವ್ಯಕ್ತಿಯ ಪರ ವಕೀಲರು ಎಸ್ಐಟಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

ಎಸ್ಐಟಿ ತಂಡದಿಂದ ಉತ್ತಮ ರೀತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿರುವಾಗ ಈ ರೀತಿಯ ಬೆಳವಣಿಗೆ ಸಾರ್ವಜನಿಕರಿಗೆ ತಂಡದ ಅಧಿಕಾರಿಗಳ ಬಗ್ಗೆ ಅಪನಂಬಿಕೆ ಮೂಡಿಸುತ್ತದೆ. ತಂಡದಲ್ಲಿ ಇಂತಹ ವ್ಯಕ್ತಿಗಳಿದ್ದಲ್ಲಿ ತನಿಖೆಗೆ ಅಡ್ಡಿಯಾಗಬಹುದು. ಹಾಗಾಗಿ ಅವರನ್ನು ಕೂಡಲೇ ಬದಲಿಸುವಂತೆ ಒತ್ತಾಯಿಸಿ ಎಸ್ಐಟಿ ಮುಖ್ಯಸ್ಥರಿಗೆ ಪತ್ರದಲ್ಲಿ ವಕೀಲರು ಆಗ್ರಹ ಮಾಡಿದ್ದಾರೆ. ವಕೀಲೆ ಅನನ್ಯಾ ಗೌಡ ಹೆಸರಿನಲ್ಲಿ ಎಸ್ಐಟಿ ಮುಖ್ಯಸ್ಥರಿಗೆ ಇಮೇಲ್ ದೂರು ನೀಡಲಾಗಿದೆ. ಮಂಜುನಾಥ ಗೌಡ ಶಿರಸಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದು, ಎಸ್ಐಟಿ ತಂಡಕ್ಕೆ ನಿಯೋಜನೆಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್ಐಟಿ ತಂಡದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
In a fresh twist to the sensational Dharmasthala human remains case, allegations have surfaced against SIT Inspector Manjunath Gowda for allegedly threatening the complainant to withdraw the case. A formal complaint in this regard has been submitted by the complainant’s legal team to SIT Chief Pranav Mohanty via email, with copies also shared with the media.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm