ಬ್ರೇಕಿಂಗ್ ನ್ಯೂಸ್
04-08-25 01:24 pm Mangalore Correspondent ಕರಾವಳಿ
ಮಂಗಳೂರು, ಆ.4 : ಧರ್ಮಸ್ಥಳದಲ್ಲಿ ಸಮಾಧಿ ಅಗೆತ ವೇಳೆ 6ನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ವಿಧಿ ವಿಜ್ಞಾನ ತಂಡದ ಮೂಲಗಳಿಂದ ಸಿಕ್ಕಿದೆ.
ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈವರೆಗಿನ ಉತ್ಖನನದಲ್ಲಿ ಪಾಯಿಂಟ್ 6ರಲ್ಲಿ ಮಾತ್ರ ಅಸ್ಥಿ ಪಂಜರದ ಅವಶೇಷ ಸಿಕ್ಕಿದೆ. ಅಲ್ಲಿ ಸಿಕ್ಕಿರುವ ಮೂಳೆಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು ಅದು 40 ವರ್ಷಗಳ ಹಿಂದೆ ಹೂತಿರುವಂಥದ್ದು ಮತ್ತು ಪೋಸ್ಟ್ ಮಾರ್ಟಂ ಮಾಡಿಯೇ ಹೂಳಲಾಗಿತ್ತು ಎಂಬ ಮಾಹಿತಿ ವಿಧಿ ವಿಜ್ಞಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.
ಈಗ ತೆಗೆದಿರುವ ಅಸ್ಥಿಪಂಜರದ ಮೂಳೆಗಳು 40 ವರ್ಷಗಳ ಹಿಂದೆ ಹೂತಿರುವ ಶವದ್ದು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಪುರುಷನ ಅಸ್ಥಿಪಂಜರ. ಈ ಬಗ್ಗೆ ಇನ್ನೊಂದು ವಾರದಲ್ಲಿ ಅಧಿಕೃತ ಮಾಹಿತಿ ಹೊರಬರಲಿದೆ.
ಈ ನಡುವೆ, ಅಸ್ಥಿ ಉತ್ಖನನಕ್ಕೆ ಭಾನುವಾರ ಬ್ರೇಕ್ ನೀಡಲಾಗಿತ್ತು. ಇದುವರೆಗೂ ದೂರುದಾರ ಗುರುತಿಸಿರುವ 10 ಪಾಯಿಂಟ್ಗಳಲ್ಲಿ ಅಗೆತ ಮಾಡಲಾಗಿದೆ. ಆದರೆ, 6ನೇ ಪಾಯಿಂಟ್ ಬಿಟ್ಟರೆ ಯಾವುದರಲ್ಲೂ ಶವ ಹೂತಿರುವ ಕುರುಹು ಪತ್ತೆಯಾಗಿಲ್ಲ. ಪಾಯಿಂಟ್ ನಂ. 11, 12, 13ರಲ್ಲಿ ಶೋಧ ಕಾರ್ಯ ಇನ್ನಷ್ಟೇ ನಡೆಯಲಿದೆ. ಈ ಮೂರು ಸ್ಪಾಟ್ಗಳ ಬಗ್ಗೆ ಕುತೂಹಲ ಹೆಚ್ಚಿದ್ದು ಅಲ್ಲಿ ಅತಿ ಹೆಚ್ಚು ಹೆಣಗಳನ್ನು ಹೂತಿದ್ದಾಗಿ ವ್ಯಕ್ತಿ ಹೇಳಿಕೊಂಡಿದ್ದ.
In a major development in the Dharmasthala human remains case, forensic experts have revealed that the skeletal remains found at the sixth excavation point are likely 40–50 years old.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm