ಬ್ರೇಕಿಂಗ್ ನ್ಯೂಸ್
04-08-25 01:58 pm Mangalore Correspondent ಕರಾವಳಿ
ಮಂಗಳೂರು, ಆ 04 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣ ರಾಜ್ಯದಾದ್ಯಂತ ತೀವ್ರ ಕುತೂಹಲವನ್ನುಂಟು ಮಾಡಿದೆ. ಈ ಗಂಭೀರ ಆರೋಪದ ತನಿಖೆಗಾಗಿ ಎಸ್ಐಟಿ ತಂಡ ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ. ಇದೀಗ ಅನಾಮಿಕ ಗುರುತಿಸಿದ್ದ 13 ಸ್ಥಳಗಳ ಪಕಿ 11ನೇ ಪಾಯಿಂಟ್ನಲ್ಲಿ ಕಾರ್ಯಾಚರಣೆ ಮಾಡಲಾಗ್ತಿದೆ. ಆದರೆ ಇದೀಗ 11 ನೇ ಪಾಯಿಂಟ್ನಲ್ಲಿ ಮೇಜರ್ ಟ್ವಿಸ್ಟ್ ಸಿಕ್ಕಿದೆ.
ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಈ ಪ್ರಕರಣದಲ್ಲಿ ಇದೀಗ ಪಾಯಿಂಟ್ ನಂಬರ್ 11ರ ಸ್ಥಳದಲ್ಲಿ ಅನಾಮಿಕ ದೂರದಾರನಿಂದ ಉಂಟಾದ ಟ್ವಿಸ್ಟ್ ಎಸ್ಐಟಿಗೆ ಗೊಂದಲವನ್ನುಂಟುಮಾಡಿದೆ.

ಅನಾಮಿಕ ವ್ಯಕ್ತಿ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ದಟ್ಟ ಕಾಡಿನಲ್ಲಿ ಸದ್ಯಕ್ಕೆ 13 ಸ್ಥಳಗಳನ್ನು ಶವಗಳನ್ನು ಹೂತಿಟ್ಟಿರುವ ಜಾಗಗಳೆಂದು ಗುರುತಿಸಿದ್ದಾನೆ. ಇದರಲ್ಲಿ ಇದೀಗ ಕಾರ್ಯಾಚರಣೆ ನಡೆಯುತ್ತಿದ್ದು, 11 ನೇ ಪಾಯಿಂಟ್ನಿಂದ ಇಂದು ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ದೂರುದಾರ 11ನೇ ಸ್ಥಳದ ತನಿಖೆಯ ಸಂದರ್ಭದಲ್ಲಿ ಅನಿರೀಕ್ಷಿತ ತಿರುವು ನೀಡಿದ್ದಾನೆ. 11ನೇ ಪಾಯಿಂಟ್ ಅಗೆಯದೆ ಮೇಲ್ಭಾಗಕ್ಕೆ ಕರೆದುಕೊಂಡು ಹೋಗಿದ್ದಾನೆ.
ಗುಡ್ಡದ ಮೇಲ್ಭಾಗಕ್ಕೆ ಕರೆದೊಯ್ದ ದೂರುದಾರ!
ಪಾಯಿಂಟ್ ನಂಬರ್ 11 ಮೊದಲು ಅನಾಮಿಕ ಗುರುತಸಿದ್ದ. ಇದೀಗ ಈ ಸ್ಥಳದಲ್ಲಿ ಉತ್ಖನನ ಆರಂಭಿಸುವ ಮೊದಲು, ದೂರದಾರನು ಎಸ್ಐಟಿ ತಂಡವನ್ನು ಗುಡ್ಡದ ಕೆಳಗಿನಿಂದ ಮೇಲಕ್ಕೆ ಕರೆದೊಯ್ದು, ಸ್ಥಳವನ್ನು ಗುರುತಿಸುವ ಬದಲು, ಗುಡ್ಡದ ಮೇಲಿರುವ ಒಂದು ನಿರ್ದಿಷ್ಟ ಪ್ರದೇಶವನ್ನು ತೋರಿಸಿದ್ದಾನೆ. ಈ ಅನಾಮಿಕ ವ್ಯಕ್ತಿಯು ಗುಡ್ಡದ ಮೇಲ್ಭಾಗಕ್ಕೆ ಇಡೀ ತಂಡವನ್ನು ಕರೆದೊಯ್ದು, ಅಗೆಯುವಿಕೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ನೀಡದೇ, ಗೊಂದಲದಿಂದಿರುವಂತೆ ವರ್ತಿಸಿದ್ದಾನೆ. ಇದೀಗ ಇದು ಎಸ್ಐಟಿಗೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಎಸ್ಐಟಿಯು ಈಗ ಈ ಸ್ಥಳದಲ್ಲಿ ಉತ್ಖನನವನ್ನು ಮುಂದುವರಿಸಲು ತಯಾರಿ ನಡೆಸಿದೆ. ಆದರೆ, ದೂರದಾರನ ಹೇಳಿಕೆಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈಗಾಗಲೇ 13 ಸ್ಥಳಗಳ ಪೈಕಿ ಒಂದರಲ್ಲಿ ಮಾತ್ರ ಮೂಳೆಗಳ ಕುರುಹು ಸಿಕ್ಕಿರುವುದು, ಆತನ ಆರೋಪಗಳ ಸತ್ಯಾಸತ್ಯತೆಯನ್ನು ಪರೀಕ್ಷಿಸುವಂತೆ ಮಾಡಿದೆ. ಎಸ್ಐಟಿಯು ಈ ಸ್ಥಳದಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಭದ್ರತೆಯನ್ನು ಕಾಪಾಡಿಕೊಂಡು, ವಿಡಿಯೋ ರೆಕಾರ್ಡಿಂಗ್ ಮೂಲಕ ತನಿಖೆಯನ್ನು ದಾಖಲಿಸುತ್ತಿದೆ.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm