ಬ್ರೇಕಿಂಗ್ ನ್ಯೂಸ್
05-08-25 04:29 pm Mangalore Correspondent ಕರಾವಳಿ
ಮಂಗಳೂರು, ಆ.5 : ಪಾಕಿಸ್ಥಾನ ವಿರುದ್ಧ 1965 ಮತ್ತು 1971ರಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಬಳಕೆಯಾಗಿದ್ದ ಭಾರತೀಯ ಭೂಸೇನೆಯ ಯುದ್ಧ ಟ್ಯಾಂಕರ್ ಟಿ-55 ಸಂಸದ ಕ್ಯಾ.ಬ್ರಿಜೇಶ್ ಚೌಟರ ಕೋರಿಕೆ ಮೇರೆಗೆ ಮಂಗಳೂರಿಗೆ ಆಗಮಿಸಿದ್ದು, ಸದ್ಯಕ್ಕೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿಯಲ್ಲಿ ಇರಿಸಲಾಗಿದೆ.
ಭಾರತೀಯ ಸೇನೆಯಲ್ಲಿ 1961ರಿಂದ 2001ರ ವರೆಗೆ ಸೇವೆಯಲ್ಲಿದ್ದ ಈ ಯುದ್ಧ ಟ್ಯಾಂಕರನ್ನು ಪುಣೆಯ ಕಿರ್ಕಿಯಲ್ಲಿರುವ ಭಾರತೀಯ ಸೇನೆಯ ಡಿಪೋದಲ್ಲಿ ಇರಿಸಲಾಗಿತ್ತು. ಅದನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ವಿಶೇಷ ಟ್ರೈಲರ್ ನಲ್ಲಿ ಮಂಗಳೂರಿಗೆ ತರಿಸಲಾಗಿದೆ. ಇತ್ತೀಚೆಗೆ ಸಂಸದ ಬ್ರಿಜೇಶ್ ಚೌಟ, ಸೇನೆಯಲ್ಲಿ ಸೇವೆಗೈದ ಟ್ಯಾಂಕರ್ ಒಂದನ್ನು ಉಚಿತವಾಗಿ ಮಂಗಳೂರಿಗೆ ನೀಡಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದರು. ಇದರಂತೆ, ಯುದ್ಧ ಟ್ಯಾಂಕ್ ಅನ್ನು ಮಂಗಳೂರು ನಗರಕ್ಕೆ ತರಿಸಲಾಗಿದೆ.


ಅಂದಹಾಗೆ, ಈ ಯುದ್ಧ ಟ್ಯಾಂಕ್ ಅನ್ನು ಕದ್ರಿಯಲ್ಲಿರುವ ವಾರ್ ಮೆಮೋರಿಯಲ್ ಬಳಿಯಲ್ಲೇ ಇರಿಸುವ ಯೋಜನೆ ಇದೆಯಂತೆ. ವೀರ ಯೋಧರನ್ನು ಸ್ಮರಿಸುವ ಮತ್ತು ಸೇನೆಗೆ ಸೇರುವ ಯುವಕರಿಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಯುದ್ಧ ಟ್ಯಾಂಕರನ್ನು ಮಂಗಳೂರು ನಗರ ಮಧ್ಯದಲ್ಲಿ ಇರಿಸಬೇಕೆಂದು ಸಂಸದ ಚೌಟರು ಯೋಚನೆ ಹೊಂದಿದ್ದಾರೆ. ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿಯಾಗಿರುವ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ಯುದ್ಧ ಸ್ಮರಣಿಕೆ ರೀತಿಯಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತದೆ. ಕದ್ರಿ ಯುದ್ಧ ಸ್ಮಾರಕದ ಬಳಿಯಲ್ಲಿ ಸೂಕ್ತ ವೇದಿಕೆಯನ್ನು ನಿರ್ಮಿಸಿ ಯುದ್ಧ ಟ್ಯಾಂಕರ್ ಇರಿಸಬೇಕೆಂಬ ಯೋಜನೆ ಇದೆಯೆಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬರೋಬ್ಬರಿ 40 ಟನ್ ತೂಕವಿರುವ ಟಿ-55 ಯುದ್ಧ ಟ್ಯಾಂಕರ್ ಶುಕ್ರವಾರ ಪುಣೆಯಿಂದ ಹೊರಟಿದ್ದು ಮೂರು ದಿನದ ಪ್ರಯಾಣದ ಬಳಿಕ ಸೋಮವಾರ ರಾತ್ರಿ ಮಂಗಳೂರು ತಲುಪಿದೆ.
A historic T-55 battle tank, which was part of India’s military operations during the 1965 and 1971 wars against Pakistan, has arrived in Mangaluru and is currently stationed near the Kadri Circuit House. The tank has been brought to the city following a request by MP Capt. Brijesh Chowta.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm