ಬ್ರೇಕಿಂಗ್ ನ್ಯೂಸ್
07-08-25 10:45 pm Mangalore Correspondent ಕರಾವಳಿ
ಉಳ್ಳಾಲ, ಆ.7 : ನಿಯಂತ್ರಣ ತಪ್ಪಿದ ಸ್ಕೂಟರೊಂದು ಆವರಣ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರನಾಗಿದ್ದ ಅವರ ಪುತ್ರ ಪ್ರಾಣಾಪಾಯದಿಂದ ಪಾರಾದ ಘಟನೆ ಉಳ್ಳಾಲದ ಸುಂದರಿಭಾಗ್ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಉಳ್ಳಾಲ ಕೋಟೆಪುರ ನಿವಾಸಿ, ಪ್ರಸ್ತುತ ಮುಕ್ಕಚ್ಚೇರಿಯಲ್ಲಿ ನೆಲೆಸಿರುವ ಇಬ್ರಾಹಿಂ (47) ಯಾನೆ ಕಮಾಲ್ ಮೃತಪಟ್ಟ ವ್ಯಕ್ತಿ. ಇಬ್ರಾಹಿಂ ಅವರು ಮಂಗಳೂರಿನ ಧಕ್ಕೆಯಲ್ಲಿ ಮೀನಿನ ವ್ಯವಹಾರ ನಡೆಸುತ್ತಿದ್ದರೆನ್ನಲಾಗಿದೆ. ಇಂದು ಸಂಜೆ ತನ್ನ ಕಿರಿಯ ಮಗನನ್ನ ಸ್ಕೂಟರಿನಲ್ಲಿ ಕುಳ್ಳಿರಿಸಿ ಸುಂದರಿ ಭಾಗ್ ನಿಂದ ಮುಕ್ಕಚ್ಚೇರಿಯ ಮನೆಯ ಕಡೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಆವರಣಗೋಡೆಯೊಂದಕ್ಕೆ ಬಡಿದ ಪರಿಣಾಮ ಇಬ್ರಾಹಿಂ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ರಾಹಿಂ ಅವರ ಪುತ್ರನ ಕೈಗೆ ಏಟು ತಗುಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಪಘಾತಕ್ಕೀಡಾದ ಇಬ್ರಾಹಿಂ ಅವರನ್ನ ತಕ್ಷಣ ಉಳ್ಳಾಲದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರು ಪರಿಶೀಲಿಸಿ ಇಬ್ರಾಹಿಂ ಅವರು ಸಾವನ್ನಪ್ಪಿರೋದಾಗಿ ತಿಳಿಸಿದ್ದರು. ಜನಾನುರಾಗಿಯಾಗಿದ್ದ ಇಬ್ರಾಹಿಂ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅವರ ಸಂಬಂಧಿಗಳು, ಹಿತೈಷಿಗಳು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು.
ಸ್ಥಳಕ್ಕೆ ಭೇಟಿ ಕೊಟ್ಟ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು ಇಬ್ರಾಹಿಂ ಅವರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಇಬ್ರಾಹಿಂ ಅವರು ಪತ್ನಿ , ಮೂವರು ಮಕ್ಕಳನ್ನ ಅಗಲಿದ್ದಾರೆ.
A tragic road accident occurred in the Sundaribagh area of Ullal on Thursday evening when a scooter lost control and rammed into a compound wall, resulting in the death of the rider on the spot. The pillion rider, his young son, survived with minor injuries
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm