ಬ್ರೇಕಿಂಗ್ ನ್ಯೂಸ್
07-08-25 11:01 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.7 : ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿರುವ ಬಗ್ಗೆ ದೂರು ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ (32) ಎಂಬವರ ದೂರಿನಂತೆ, ಆರೋಪಿತ ಗಿರೀಶ್ ಮಟ್ಟಣ್ಣವರ್ ಅವರು ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ ಆಗುವಂತೆ, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವೀಡಿಯೋವನ್ನು ಪೇಸ್ಬುಕ್ ನಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣಾ ಅಕ್ರ: 78/2025 ಕಲಂ:57, 296 ಜೊತೆಗೆ 190 ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ದೂರುದಾರ ಚರಣ್ ಶೆಟ್ಟಿ ಅವರು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ನೋಡುತ್ತಿದ್ದಾಗ, ಆರೋಪಿತ ಮಹೇಶ್ ತಿಮರೋಡಿ ಅವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ನಲ್ಲಿ, ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಭೀತಿಯನ್ನುಂಟಾಗುವಂತೆ ಹೇಳಿಕೆಗಳನ್ನು ಪ್ರಚಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯ 79/2025 ಕಲಂ: 353(2) ಬಿಎನ್ಎಸ್ -2023ರಂತೆ ಪ್ರಕರಣ ದಾಖಲಾಗಿರುತ್ತದೆ.
ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ (37) ಎಂಬವರ ದೂರಿನಂತೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಆರೋಪಿತ ಪುನೀತ್ ಕೆರೆಹಳ್ಳಿ ಎಂಬವರು ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣಾ ಅಕ್ರ:80/2025, ಕಲಂ: 296 BNS 2023 ರಂತೆ ಪ್ರಕರಣ ದಾಖಲಾಗಿದೆ.
Three individuals — Girish Mattennavar, Mahesh Shetty Timarodi, and Puneeth Kerehalli — have been booked by the Belthangady police for allegedly making provocative and offensive statements on social media platforms, inciting public unrest and religious discord in connection with the Dharmasthala controversy.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm