ಬ್ರೇಕಿಂಗ್ ನ್ಯೂಸ್
24-12-20 05:10 pm Mangalore Correspondent ಕರಾವಳಿ
ಮಂಗಳೂರು, ಡಿ.24 : ನಗರದ ಎಲ್ಲೆಂದರಲ್ಲಿ ಕಾಮಗಾರಿ ನಡೆಸುತ್ತಾ ನಿತ್ಯ ಸಂಚಾರಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ.
ಕಾಮಗಾರಿ ತಾತ್ಕಾಲಿಕ ನಿಲ್ಲಿಸುವ ಕುರಿತಾಗಿ ಪಾಲಿಕೆ ಆಯುಕ್ತ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ಹೈಕೋರ್ಟ್ಗೆ ತಿಳಿಸಿದ್ದಾರೆ.

ನಿರ್ಮಾಣ ಹಾಗೂ ನೆಲಸಮ ತ್ಯಾಜ್ಯ ನಿರ್ವಹಣೆ- 2016ರ ನಿಯಮಗಳನ್ನು ಅನುಸರಿಸುವ ತನಕ ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿತ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಈ ಸಂಬಂಧ ಆಯಾ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಪಚ್ಚನಾಡಿ, ಮಂದಾರದಲ್ಲಿ ಘನತ್ಯಾಜ್ಯ ಘಟಕದಿಂದ ಉಂಟಾದ ಅನಾಹುತಗಳ ಬಗ್ಗೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾ.ಎ.ಎಸ್.ಓಕಾ ಹಾಗೂ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ನ್ಯಾಯಪೀಠ, ಅಕ್ಷಯ್ ಶ್ರೀಧರ್ ಅವರನ್ನು ಪ್ರಶ್ನೋತ್ತರ ವಿಧಾನದಲ್ಲಿ ವಿಚಾರಣೆ ನಡೆಸಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿಯಮ ಪಾಲಿಸಲಾಗುತ್ತಿದೆಯೇ ಎಂದು ಪ್ರಶ್ನೆ ಮಾಡಿದೆ. ಅಲ್ಲದೆ, ನಿಯಮ ಪಾಲಿಸುತ್ತಿಲ್ಲ ಎಂದಾದರೆ ನಿಯಮಗಳನ್ನು ಪಾಲಿಸುವ ತನಕ ಕಾಮಗಾರಿ ಸ್ಥಗಿತಗೊಳಿಸುತ್ತೀರಾ ಎಂದು ಪ್ರಶ್ನಿಸಿದೆ.
ಇದಕ್ಕೆ ಉತ್ತರಿಸಿದ ಆಯುಕ್ತರು, ಸದ್ರಿ ನಿಯಮಗಳನ್ನು ಪಾಲನೆ ಮಾಡಲಾಗುತ್ತಿಲ್ಲ. 2016ರ ನಿಯಮಗಳನ್ನು ಅನುಸರಿಸುವ ತನಕ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am