ಬ್ರೇಕಿಂಗ್ ನ್ಯೂಸ್
08-08-25 11:10 pm Mangalore Correspondent ಕರಾವಳಿ
ಮಂಗಳೂರು, ಆ 08 : ಕಮಿಷನ್ ರೂಪದಲ್ಲಿ ಕೋಟ್ಯಂತರ ಮೊತ್ತ ಪಡೆದು ಕೋಟ್ಯಾಂತರ ರೂಪಾಯಿ ವಂಚಿಸುತ್ತಿದ್ದ ರೋಶನ್ ಸಲ್ದಾನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಐದು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ಕಾರ್ಯ ಆರಂಭಿಸಿದೆ. ಶೋಧದ ಸಂದರ್ಭದಲ್ಲಿ ಡೈರಿ, ಕಾಗದ ಪತ್ರಗಳು ಸೇರಿದಂತೆ ಮಹತ್ವದ ದಾಖಲೆಗಳು ಲಭ್ಯವಾಗಿವೆ.
ಕಂಕನಾಡಿ ಬೊಲ್ಲಗುಡ್ಡದ ಜಾನ್ ಸಲ್ದಾನ ಅವರ ಮಗ ರೋಷನ್ ಸಲ್ದಾನ, ಉದ್ಯಮಿಗಳಿಗೆ ಸಾಲ ಕೊಡಿಸುವ ಆಮಿಷ ಒಡ್ಡಿ ವಂಚನೆ ಮಾಡುತ್ತಿದ್ದ. ಮಂಗಳೂರು ಮತ್ತು ಚಿತ್ರದುರ್ಗದಲ್ಲಿ ದಾಖಲಾದ ದೂರುಗಳ ಆಧಾರದಲ್ಲಿ ಜುಲೈ 17ರಂದು ಆತನ ವೈಭವೋಪೇತ ಬಂಗಲೆ ಮೇಲೆ ದಾಳಿ ನಡೆಸಿದ ನಗರ ಪೊಲೀಸರು ಆತನನ್ನು ಬಂಧಿಸಿದ್ದರು. ನಂತರ ಕಾನೂನು ಜಾರಿ ಏಜೆನ್ಸಿ ಈತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿತ್ತು.
ಕಡಿಮೆ ಬಡ್ಡಿ ದರದಲ್ಲಿ ಕೋಟ್ಯಂತರ ಮೊತ್ತದ ಸಾಲ ಕೊಡಿಸುವುದಾಗಿ ಹೇಳಿ ಕಮಿಷನ್ ಮತ್ತು ಸ್ಟ್ಯಾಂಪ್ ಡ್ಯೂಟಿ ನೆಪದಲ್ಲಿ ಹಲವು ಉದ್ಯಮಿಗಳಿಂದ ಅಂದಾಜು ₹ 39 ಕೋಟಿ ಮೊತ್ತವನ್ನು ರೋಷನ್, ಡಾಫಿ ಮತ್ತು ಇತರರು ಪಡೆದುಕೊಂಡು ವಂಚಿಸಿದ್ದಾರೆ. ಐಶಾರಾಮಿ ಜೀವನ ನಡೆಸುತ್ತಿದ್ದ ರೋಷನ್ ಉದ್ಯಮಿಗಳನ್ನು ಮನೆಗೆ ಕರೆಸಿ ಸತ್ಕರಿಸುತ್ತಿದ್ದ ಎಂದೂ ತಿಳಿದುಬಂದಿತ್ತು.
ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಶೋಧ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿ ₹ 3.75 ಕೋಟಿ ಮೊತ್ತ ಪತ್ತೆಯಾಗಿತ್ತು. *5.75 ಕೋಟಿ ಮೊತ್ತದಲ್ಲಿ ಪತ್ನಿಯ ಹೆಸರಿನಲ್ಲಿ 5 ಮೀನುಗಾರಿಕಾ ಬೋಟ್ಗಳನ್ನು ಖರೀದಿಸಿರುವುದೂ ಪತ್ತೆಯಾಗಿದೆ. ಈ ಬೋಟ್ಗಳನ್ನು ಮುಟ್ಟುಗೋಲು ಹಾಕಲಾಗಿದೆ.
ಮಂಗಳೂರು ಪೊಲೀಸರು ರೋಷನ್ನ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ವಿದೇಶಿ-ದೇಶಿ ಮದ್ಯದ ಬಾಟಲಿಗಳನ್ನು ಒಳಗೊಂಡ ಮಿನಿ ಬಾರ್, ಚಿನ್ನದ ಲೇಪ ಇರುವಂತೆ ಗೋಚರಿಸುವ ಆಸನಗಳು, ಶೋಕಿಗಾಗಿ ಬಳಸಿದ ಬಗೆಬಗೆಯ ನವನವೀನ ಆಲಂಕಾರಿಕ ವಸ್ತುಗಳು ಮತ್ತು ನಿಗೂಢ ಅಡಗುತಾಣವನ್ನು ಪತ್ತೆ ಮಾಡಿದ್ದರು.
667 ಗ್ರಾಂ ಚಿನ್ನದ ಆಭರಣಗಳು, ₹ 2.75 ಕೋಟಿ ಮೊತ್ತದ ವಜ್ರದ ಉಂಗುರ, ₹ 6 ಲಕ್ಷ 72 ಸಾವಿರ ಬೆಲೆಬಾಳುವ ಮದ್ಯವನ್ನೂ ವಶಪಡಿಸಿಕೊಳ್ಳಲಾಗಿತ್ತು. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮದ್ಯದ ದಾಸ್ತಾನು ಇರಿಸಿದ್ದಕ್ಕಾಗಿ ಅಬಕಾರಿ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಮನೆಯನ್ನೇ ಆತ ಹಣಕಾಸು ವ್ಯವಹಾರದ ಅಡ್ಡೆಯನ್ನಾಗಿಸಿಕೊಂಡಿದ್ದ. ಬೆಂಗಳೂರು, ವಿಜಯಪುರ, ತುಮಕೂರು, ಬಾಗಲಕೋಟೆ, ಕೋಲ್ಕತ್ತ, ಗೋವಾ, ಪುಣೆ, ಲಖನೌ, ಸಾಂಗ್ಲಿ ಮುಂತಾದ ಕಡೆಗಳಲ್ಲಿ ಆತ ವಂಚನೆ ಮಾಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದರು.
The Enforcement Directorate (ED) has conducted searches at five locations in Mangaluru in connection with the multi-crore fraud case involving Roshan Saldanha, seizing assets worth ₹9.5 crore, including five fishing boats purchased in his wife’s name.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm