ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm