ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm