ಬ್ರೇಕಿಂಗ್ ನ್ಯೂಸ್
10-08-25 01:01 pm Mangalore Correspondent ಕರಾವಳಿ
ಉಳ್ಳಾಲ, ಆ.10 : ಮನುಷ್ಯ ಸತ್ತ ಮೇಲೆ ದೇವಸ್ಥಾನದ ವಠಾರದಲ್ಲಿ ಹೂಳುವ ಕ್ರಮವು ಭಾರತೀಯ ಸಂಸ್ಕೃತಿಯಾಗಿದೆ. ಧರ್ಮಸ್ಥಳದ ಹೆಸರು ಹಾಳಾಗುತ್ತಿದ್ದರೂ ಪ್ರಧಾನಿ ಮೋದಿಯವರೇ ನೀವು ಏನು ಮಾಡುತ್ತಿದ್ದೀರಿ. ಮೋದಿಯವರೇ ಧೈರ್ಯ ತಾಕತ್ತಿದ್ದರೆ ಧರ್ಮಸ್ಥಳಕ್ಕೆ ಹೋಗಿ ನಿಂತು ಭಾಷಣ ಮಾಡಿ. ಶವ ಹೂಳುವುದು ದೇವಸ್ಥಾನಗಳಲ್ಲಿ ಮಾತ್ರವೇ.. ಮಸೀದಿ, ಚರ್ಚ್ ಗಳಲ್ಲೂ ಶವಗಳನ್ನ ಹೂತಿಲ್ಲವೇ ಎಂದು ಕೇಳಿ ಎಂದು ಮಾಜಿ ಕೇಂದ್ರ ಸಚಿವರೂ ಹಿರಿಯ ಕಾಂಗ್ರೆಸ್ ಮುಖಂಡರೂ ಆದ ಬಿ.ಜನಾರ್ಧನ ಪೂಜಾರಿ ಗುಡುಗಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ "ಮುದ್ದುಕೃಷ್ಣ -2025" ಕೃಷ್ಣ ವೇಷ ಸ್ಪರ್ಧೆಯನ್ನ ಉದ್ಘಾಟಿಸಿ ಅವರು ಮಾತನಾಡಿದರು.







ಧರ್ಮಸ್ಥಳ ಕ್ಷೇತ್ರಕ್ಕೆ ಅವಹೇಳನ ಆಗುತ್ತಿದ್ದರೂ ಪೂಜಾರಿ ಯಾಕೆ ಸುಮ್ಮನಿದ್ದಾರೆಂದು ಇಡೀ ದೇಶ, ಜಗತ್ತು ಕೇಳುತ್ತಾ ಇದೆ. ಹೆಗ್ಗಡೆಯವರೇ ಧರ್ಮಸ್ಥಳದ ಒಟ್ಟಿಗೆ ಇಡೀ ದೇಶ ಅಲ್ಲ, ಜಗತ್ತೇ ಇದೆ. ಕುದ್ರೋಳಿ ದೇವಸ್ಥಾನ ನಿರ್ಮಿಸುವಾಗ ಎಷ್ಟು ಕಷ್ಟ ಆಗಿದೆ. ದೇವಸ್ಥಾನವನ್ನ ನಡೆಸಲು ಎಷ್ಟೊಂದು ಕಷ್ಟ ಇದೆ ಅನ್ನೋದು ನನಗೆ ತಿಳಿದಿದೆ. ಹೆಗ್ಗಡೆಯವರೇ ನಿಮ್ಮ ಜೊತೆ ಪೂಜಾರಿ ಇದ್ದಾರೆ. ನಾನು ಕೂಡಾ ಧರ್ಮಸ್ಥಳದ ಭಕ್ತನಾಗಿದ್ದೇನೆ. ಧರ್ಮಸ್ಥಳವು ಧರ್ಮದ ಸ್ಥಳವಾಗಿದೆ. ಅದು ಜೈನರಿಗೆ ಮಾತ್ರ ಸೇರಿಲ್ಲ, ಜಗತ್ತಿಗೆ ಅದು ಹೆಮ್ಮೆಯ ಸ್ಥಳವಾಗಿದೆ. ಧರ್ಮಸ್ಥಳವನ್ನ ಹಾಳು ಮಾಡಲು ಯಮನಿಂದಲೂ ಸಾಧ್ಯವಿಲ್ಲ.
ಹಿಂದೂಗಳು ಮಾತ್ರವಲ್ಲ ಮುಸ್ಲಿಂ, ಕ್ರಿಶ್ಚಿಯನ್ನರು ಸತ್ತಾಗಲೂ ಶವಗಳನ್ನ ಮಸೀದಿ, ಚರ್ಚ್ ಗಳ ವಠಾರದಲ್ಲಿ ಹೂಳುವುದು ಅದು ಭಾರತೀಯ ಸಂಸ್ಕೃತಿಯಾಗಿದೆ.
ಶವಗಳನ್ನ ಹೂತಿಟ್ಟ ಆರೋಪದಲ್ಲಿ ಧರ್ಮಸ್ಥಳ ವಠಾರವನ್ನ ಎಸ್ ಐಟಿ ಯವರು ಅಗೆಯುತ್ತಿದ್ದಾರೆ. ಎಸ್ ಐಟಿಯವರು ಹುಡುಕಿದರೂ ಏನೂ ಸಿಕ್ಕಿಲ್ಲ, ಸಿಗೋದಿಲ್ಲ. ನೀವು ಎಷ್ಟು ಹುಡುಕಿದರೂ ಸಿಗುವುದಿಲ್ಲ. ಎಸ್ ಐಟಿಯವರೇ, ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ ನೀವು. ಧರ್ಮಸ್ಥಳದ ಹೆಸರು ಹಾಳಾಗುತ್ತಿದ್ದರೂ ಯಾಕೆ ನೀವು ಬಾಯಿ ಬಿಡುವುದಿಲ್ಲ, ನಾಚಿಗೆ ಆಗುತ್ತಿದೆ ನನಗೆ. ದೇವಸ್ಥಾನವನ್ನು ಹಾಳು ಮಾಡುವಾಗ ಮಾತನಾಡುವ ಧೈರ್ಯ ನಿಮಗಿಲ್ಲ. ಆದರೆ ನಾನು ಮಾತನಾಡುತ್ತಿದ್ದೇನೆ. ಪೂಜಾರಿಯನ್ನ ಜೈಲಿಗೆ ಹಾಕಿದರೂ ಧರ್ಮಸ್ಥಳದ ಹೆಸರು ಹಾಳು ಮಾಡಲು ಬಿಡೋದಿಲ್ಲ ಎಂದು ಗುಡುಗಿದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಸುರೇಶ್ ಭಟ್ನಗರ, ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷರಾದ ಚಂದ್ರಕಾಂತ್ ಕ್ಲಿಕ್ ತೊಕ್ಕೊಟ್ಟು, ಉಪಾಧ್ಯಕ್ಷರಾದ ಸತೀಶ್ ದೀಪಂ, ಪ್ರಧಾನ ಕಾರ್ಯದರ್ಶಿ ಭವಿತ್ ಬಂಗೇರ, ಕಾರ್ಯಕ್ರಮ ಸಂಯೋಜಕ ಅಶೋಕ್ ಕ್ಲಿಕ್ ಮೊದಲಾದವರು ಉಪಸ್ಥಿತರಿದ್ದರು.
Former Union Minister and senior Congress leader B. Janardhan Poojary has strongly criticised the ongoing SIT investigation into allegations of human remains being buried in the Dharmasthala temple premises, calling it an insult to the sacred site.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm