ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm