ಬ್ರೇಕಿಂಗ್ ನ್ಯೂಸ್
12-08-25 01:49 pm Mangalore Correspondent ಕರಾವಳಿ
ಮಂಗಳೂರು, ಆ.12 : ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಹಿಂದಿನ ಗುತ್ತಿಗೆದಾರರು ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸಲು ಹುನ್ನಾರ ನಡೆಸಿದ್ದಾರೆ ಎಂದು ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ| ಪ್ರಶಾಂತ್ ಪೈ ಅವರು ಕಾವೂರು ಠಾಣೆಗೆ ದೂರು ನೀಡಿದ್ದಾರೆ.
ಉದ್ಯಾನವನದ ಪ್ರಾಣಿಗಳಿಗೆ ಮಾಂಸ ನೀಡಲು ಹೊಸ ಗುತ್ತಿಗೆದಾರರು ಗುತ್ತಿಗೆ ಪಡೆದಿದ್ದಾರೆ. ಸದ್ರಿ ಮಾಂಸವನ್ನು ತಿರಸ್ಕರಿಸುವ ನಿಟ್ಟಿನಲ್ಲಿ ಹಿಂದಿನ ಟೆಂಡರುದಾರರ ನೌಕರನೊಬ್ಬ ಆಗಸ್ಟ್ 7ರಂದು ಉದ್ಯಾನವನದ ಸಿಬಂದಿಗೆ ಕರೆ ಮಾಡಿ, ಮಾಂಸದಲ್ಲಿ ವಿಷ ಬೆರೆಸುವಂತೆ ತಿಳಿಸಿದ್ದಾನೆ. ಆ ಮೂಲಕ ವಿಷಾಹಾರ ನೀಡಿ ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಿರುವುದು ಗೊತ್ತಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಅರಣ್ಯಾಧಿಕಾರಿಯೂ ಆಗಿರುವ ಪ್ರಶಾಂತ ಪೈ ಆಗ್ರಹಿದ್ದಾರೆ.
ಘಟನೆ ಬಗ್ಗೆ ಇದೇ ಆ.8ರಂದು ಪಿಲಿಕುಳ ಜೈವಿಕ ಉದ್ಯಾನವನದ ವೈಧ್ಯಾಧಿಕಾರಿ ಡಾ.ದಿವ್ಯಾ ಗಣೇಶ್ ಅವರು ಪ್ರಾಧಿಕಾರದ ನಿರ್ದೇಶಕರಿಗೆ ಈ ಕುರಿತಾಗಿ ದೂರು ನೀಡಿದ್ದರು. ಇದರಂತೆ, ಪಿಲಿಕುಳ ಜೈವಿಕ ಉದ್ಯಾನವನದ ನೌಕರ ಹರೀಶ್ ಅವರನ್ನು ವಿಚಾರಿಸಿದಾಗ, ಈ ಹಿಂದೆ ಮಾಂಸ ಪೂರೈಕೆಗೆ ಟೆಂಡರ್ ಪಡೆದಿದ್ದ ಖಾದರ್ (ಅವರು ಟೆಂಡರುದಾರರೂ ಸಹ ಆಗಿರುತ್ತಾರೆ) ನಿರ್ದೇಶನದ ಮೇರೆಗೆ ಅಬ್ಬಾಸ್ ಹಾಗೂ ಹನೀಫ್ ಎಂಬವರು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಮಾಂಸವನ್ನು ವಿತರಿಸುತ್ತಿದ್ದರು. ಈ ಬಾರಿ ಬೇರೆಯವರು ಬಿಡ್ ಹಾಕಿದ್ದರಿಂದ ಟೆಂಡರ್ ಬೇರೆಯವರಿಗೆ ಹೋಗಿತ್ತು. ಆ.7ರಂದು ಅಬ್ಬಾಸ್ ಅವರ ನೌಕರ ಹನೀಫ್ ಎಂಬವರು ಪಿಲಿಕುಳದ ನೌಕರ ಹರೀಶ್ ಅವರಿಗೆ ಕರೆ ಮಾಡಿ, ಈಗಿನ ಟೆಂಡರುದಾರರು ಪೂರೈಸುತ್ತಿರುವ ಮಾಂಸಕ್ಕೆ ಕೊಳೆತ ಮಾಂಸ ಅಥವಾ ವಿಷ ಮಾಂಸವನ್ನು ಬೆರೆಸಿ, ಸದ್ರಿ ಟೆಂಡರನ್ನು ತಿರಸ್ಕರಿಸುವಂತೆ ಮಾಡಲು ಹುನ್ನಾರ ಮಾಡಿರುವುದಾಗಿ ಹೇಳಿದ್ದಾರೆ. ಅಲ್ಲದೆ ಈಗಿರುವ ಟೆಂಡರುದಾರರನ್ನು ತಿರಸ್ಕೃತಗೊಳಿಸಲು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳನ್ನು ಕೊಲ್ಲಲು ಹುನ್ನಾರ ಮಾಡಿರುವುದು ತಿಳಿದುಬಂದಿತ್ತು.
ಈ ವಿಷಯದ ಬಗ್ಗೆ, ಹರೀಶ್ ಮತ್ತು ಹನೀಫ್ ಅವರು ಮಾತನಾಡಿರುವ ಆಡಿಯೋ ರೆಕಾರ್ಡ್ ತುಣುಕನ್ನು ಪೊಲೀಸರಿಗೆ ನೀಡಿದ್ದಾರೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಹಾಗೂ ಅಬ್ಬಾಸ್ ಹಾಗೂ ಹನೀಫ್ ಎಂಬವರ ಮೊಬೈಲ್ ಪೋನ್ಗಳನ್ನು ಪರೀಲಿಸಿದರೆ, ಇದರ ಹಿಂದೆ ಯಾರೆಲ್ಲ ಇದ್ದಾರೆ? ಯಾರ ಕೈವಾಡ ಇರುಬಹುದು? ಎಂಬ ಬಗ್ಗೆ, ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ದೂರು ಸಲ್ಲಿಸಿದ್ದಾರೆ.
A shocking allegation has surfaced from the Pilikula Biological Park, where the zoo’s director, Dr. Prashanth Pai, has lodged a complaint with Kavoor Police claiming that a former meat supply contractor conspired to poison the park’s animals after losing the latest supply tender.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm