ಬ್ರೇಕಿಂಗ್ ನ್ಯೂಸ್
12-08-25 08:34 pm Mangalore Correspondent ಕರಾವಳಿ
ಮಂಗಳೂರು, ಆ.12 : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆ ತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳಲ್ಲಿ ನಡೆದ ಚರ್ಚೆಗಳು ಹಾಗೂ ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರಿತಂತೆ ಸಭೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು. ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುವುದು. ಈ ನಿಟ್ಟಿನಲ್ಲಿ SOP ಡ್ರಾಫ್ಟ್ ಅನ್ನ ಸಿದ್ಧಪಡಿಸುತ್ತಿರುವ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.


ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗೆ ದೊರಕಿಸಿಕೊಡುವತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಯಲ್ಟಿಯನ್ನ ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
A high-level meeting was held today at Vidhana Soudha, Bengaluru, under the leadership of Legislative Assembly Speaker U.T. Khader and Dakshina Kannada District In-Charge Minister, to discuss legal provisions for allowing red stone mining in coastal Karnataka, including Dakshina Kannada district.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm