ಬ್ರೇಕಿಂಗ್ ನ್ಯೂಸ್
13-08-25 10:17 am Mangalore Correspondent ಕರಾವಳಿ
ಉಳ್ಳಾಲ, ಆ.13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಮೃತ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ.

ಘಟನೆಯಲ್ಲಿ ರಾಘವೇಂದ್ರ ಅವರ ತಲೆಯು ರಸ್ತೆ ಬದಿಯ ಆವರಣ ಗೋಡೆಗೆ ಬಡಿದ ಪರಿಣಾಮ ಸ್ಥಳದಲ್ಲಿ ರಕ್ತದೋಕುಳಿಯೇ ಹರಿದಿದೆ. ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವರಿಸಿದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲೇ ಅವರು ಉಸಿರು ಚೆಲ್ಲಿದ್ದರೆನ್ನಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಾಘವೇಂದ್ರ ಅವರು ತಾಯಿ, ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
In a tragic road accident on Tuesday night, a scooter skidded out of control and crashed into the compound wall of a roadside house in the Someshwar Town Panchayat limits, Ambika Road, leading to the death of the rider.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm