ಬ್ರೇಕಿಂಗ್ ನ್ಯೂಸ್
13-08-25 10:22 pm Mangalore Correspondent ಕರಾವಳಿ
ಬಂಟ್ವಾಳ, ಆ.13 : ಲಂಚದ ಹಣಕ್ಕೆ ಕೈಯೊಡ್ಡಿದ ಬಂಟ್ವಾಳ ಉಪ ತಹಶೀಲ್ದಾರ್ ಹಾಗೂ ಇತರ ಇಬ್ಬರು ಸಿಬಂದಿಯನ್ನು ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿದೆ.
ಸಜಿಪ ಮುನ್ನೂರು ಗ್ರಾಮದ ಸರ್ವೇ ನಂಬರ್ 102/1ರಲ್ಲಿ ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಲ್ಲಿ ಪೌತಿ ಖಾತೆ ಮಾಡಿಕೊಡಲು
ಬಂಟ್ವಾಳ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದ್ದು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಇದರ ದಾಖಲಾತಿ ಫೈಲನ್ನು ಕಳೆದ ಏಪ್ರಿಲ್ ತಿಂಗಳಿನಿಂದ ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲೇ ಬಾಕಿ ಇಟ್ಟುಕೊಂಡಿದ್ದು ಈ ಬಗ್ಗೆ ದೂರುದಾರರು ಬಂಟ್ವಾಳ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಮತ್ತು ಕೇಸ್ ವರ್ಕರ್ ಸಂತೋಷ್ ಎಂಬವರಲ್ಲಿ ವಿಚಾರಿಸಿದ್ದರು. ಪೌತಿ ಖಾತೆ ಮಾಡಿಕೊಡಲು 1,500 ರೂ. ನೀಡುವಂತೆ ಕೇಸ್ ವರ್ಕರ್ ಸಂತೋಷ್ ಹಾಗೂ ಪೌತಿ ಖಾತೆ ಮಾಡಿಕೊಡಲು ತಹಶೀಲ್ದಾರ್ ಅವರಿಗೆ 20,000 ರೂ. ನೀಡಬೇಕು ಎಂದು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಕೇಳಿದ್ದರು ಎಂದು ದೂರುದಾರರು ಸಾಕ್ಷಿಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬುಧವಾರ ಮಧ್ಯಾಹ್ನ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಬ್ರೋಕರ್ ಗಣೇಶ್ ವಾಮದಪದವು ಅವರ ಮೂಲಕ 20,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್, ಬ್ರೋಕರ್ ಗಣೇಶ್ ವಾಮದಪದವು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನಾ ಪಿ.ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್, ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.
In a major anti-corruption operation, Lokayukta officials caught Bantwal Deputy Tahsildar Rajesh Naik red-handed while allegedly accepting a bribe of ₹20,000. Along with him, a case worker and a broker have also been arrested.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm