ಬ್ರೇಕಿಂಗ್ ನ್ಯೂಸ್
13-08-25 10:22 pm Mangalore Correspondent ಕರಾವಳಿ
ಬಂಟ್ವಾಳ, ಆ.13 : ಲಂಚದ ಹಣಕ್ಕೆ ಕೈಯೊಡ್ಡಿದ ಬಂಟ್ವಾಳ ಉಪ ತಹಶೀಲ್ದಾರ್ ಹಾಗೂ ಇತರ ಇಬ್ಬರು ಸಿಬಂದಿಯನ್ನು ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿದೆ.
ಸಜಿಪ ಮುನ್ನೂರು ಗ್ರಾಮದ ಸರ್ವೇ ನಂಬರ್ 102/1ರಲ್ಲಿ ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಲ್ಲಿ ಪೌತಿ ಖಾತೆ ಮಾಡಿಕೊಡಲು
ಬಂಟ್ವಾಳ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದ್ದು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಇದರ ದಾಖಲಾತಿ ಫೈಲನ್ನು ಕಳೆದ ಏಪ್ರಿಲ್ ತಿಂಗಳಿನಿಂದ ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲೇ ಬಾಕಿ ಇಟ್ಟುಕೊಂಡಿದ್ದು ಈ ಬಗ್ಗೆ ದೂರುದಾರರು ಬಂಟ್ವಾಳ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಮತ್ತು ಕೇಸ್ ವರ್ಕರ್ ಸಂತೋಷ್ ಎಂಬವರಲ್ಲಿ ವಿಚಾರಿಸಿದ್ದರು. ಪೌತಿ ಖಾತೆ ಮಾಡಿಕೊಡಲು 1,500 ರೂ. ನೀಡುವಂತೆ ಕೇಸ್ ವರ್ಕರ್ ಸಂತೋಷ್ ಹಾಗೂ ಪೌತಿ ಖಾತೆ ಮಾಡಿಕೊಡಲು ತಹಶೀಲ್ದಾರ್ ಅವರಿಗೆ 20,000 ರೂ. ನೀಡಬೇಕು ಎಂದು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಕೇಳಿದ್ದರು ಎಂದು ದೂರುದಾರರು ಸಾಕ್ಷಿಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬುಧವಾರ ಮಧ್ಯಾಹ್ನ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಬ್ರೋಕರ್ ಗಣೇಶ್ ವಾಮದಪದವು ಅವರ ಮೂಲಕ 20,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್, ಬ್ರೋಕರ್ ಗಣೇಶ್ ವಾಮದಪದವು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನಾ ಪಿ.ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್, ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.
In a major anti-corruption operation, Lokayukta officials caught Bantwal Deputy Tahsildar Rajesh Naik red-handed while allegedly accepting a bribe of ₹20,000. Along with him, a case worker and a broker have also been arrested.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm