ಬ್ರೇಕಿಂಗ್ ನ್ಯೂಸ್
16-08-25 04:45 pm Mangalore Correspondent ಕರಾವಳಿ
ಮಂಗಳೂರು, ಆ.16 : ಧರ್ಮಸ್ಥಳ ಗ್ರಾಮದಲ್ಲಿ 1987ರಿಂದ 2025ರ ವರೆಗೆ 279 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿಯೇ ಮಾಹಿತಿ ಹಕ್ಕಿನಡಿ ತಿಳಿಸಿದೆ. ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ನಡುವೆಯೇ ಗ್ರಾಪಂ ನೀಡಿರುವ ಈ ಮಾಹಿತಿ ವಿವಾದಕ್ಕೆ ಕಾರಣವಾಗಿದೆ.
ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1987 ರಿಂದ 2025ರ ವರೆಗೆ ಅಂದರೆ 38 ವರ್ಷಗಳಲ್ಲಿ 279 ಅನಾಥ ಶವಗಳನ್ನು ಧರ್ಮಸ್ಥಳದಲ್ಲಿ ಹೂಳಲಾಗಿದೆ. ಇದರಲ್ಲಿ ಒಂದು ನವಜಾತ ಶಿಶು, 219 ಪುರುಷರು ಹಾಗೂ 46 ಮಹಿಳೆಯರ ಶವಗಳನ್ನು ಹೂಳಲಾಗಿದೆ ಎಂದು ಹೇಳಿದೆ. ಈ ಪೈಕಿ 14 ಶವಗಳ ಲಿಂಗವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಆರ್ಟಿಐ ಪ್ರಶ್ನೆಗೆ ಈ ಮಾಹಿತಿ ನೀಡಿದೆ. 2003 - 2004, 2006 - 2007 ಮತ್ತು 2014 - 2015 ರಲ್ಲಿ 17 ಅನಾಥ ಶವಗಳನ್ನು ಹೂಳಲಾಗಿತ್ತು. ಕಳೆದ 10 ವರ್ಷಗಳಲ್ಲಿ 101 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಆರ್ಟಿಐನಡಿ ಮಾಹಿತಿ ಕೇಳಿ ವರದಿ ಮಾಡಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆ ಮಾಡಿಸುತ್ತಿದೆ. ಆದರೆ ತನಿಖೆ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್, ಇದರ ಹಿಂದೆ ಷಡ್ಯಂತ್ರ ಇದೆಯೆಂದು ಹೇಳುವ ಮೂಲಕ ಒಟ್ಟು ತನಿಖಾ ಪ್ರಕ್ರಿಯೆಗೆ ಎಳ್ಳುನೀರು ಬಿಡುವ ಯತ್ನ ಮಾಡಿದ್ದಾರೆ. ಇದಲ್ಲದೆ, ಶವಗಳನ್ನು ಹೂತಿದ್ದೇನೆಂದು ಹೇಳಿರುವ ವ್ಯಕ್ತಿ ತೋರಿಸಿದ ಜಾಗದಲ್ಲಿ ಅಗೆದರೂ ಸಾಕ್ಷ್ಯ ಸಿಗದಿರುವುದು ನಾನಾ ರೀತಿಯ ಶಂಕೆಗೆ ಕಾರಣವಾಗಿದೆ.
ಸದ್ಯಕ್ಕೆ, ಪ್ರಕರಣ ಸಂಬಂಧಿಸಿದಂತೆ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಗೆ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿರಾಮ ನೀಡಲಾಗಿತ್ತು. ಶನಿವಾರ, ಭಾನುವಾರವೂ ಶೋಧ ಕಾರ್ಯ ನಡೆಯುವ ಸಾಧ್ಯತೆ ಇಲ್ಲ. ಎಸ್ಐಟಿ ತನಿಖಾ ತಂಡದಿಂದ ಜು.28ರಂದು ಶೋಧ ಕಾರ್ಯ ಆರಂಭಿಸಿದ್ದು ರಜಾ ದಿನಗಳನ್ನು ಹೊರತುಪಡಿಸಿ 15 ದಿನಗಳಲ್ಲಿ 17 ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ವಿಪಕ್ಷಗಳ ಆಗ್ರಹ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ಸದನದಲ್ಲಿ ಪ್ರಕರಣದ ಕುರಿತು ಉತ್ತರ ನೀಡಲಿದ್ದಾರೆ ಎನ್ನಲಾಗುತ್ತಿದೆ.
Amid ongoing controversy surrounding the alleged burial of hundreds of bodies in Dharmasthala, a Right to Information (RTI) reply from the Dharmasthala Gram Panchayat has confirmed that 279 unclaimed bodies were buried in the area over the past 38 years, from 1987 to 2025.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm