ಬ್ರೇಕಿಂಗ್ ನ್ಯೂಸ್
16-08-25 11:11 pm Mangalore Correspondent ಕರಾವಳಿ
ಮಂಗಳೂರು, ಆ.16 : ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡರೆ, ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.
ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿಯಿಂದ ಹಲವೆಡೆ ಗುಡ್ಡ ಕುಸಿದಿದ್ದು ಮರ, ಗಿಡಗಳ ಸಮೇತ ರಸ್ತೆಗೆ ಗುಡ್ಡ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಘಾಟ್ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಶನಿವಾರ ಸಂಜೆಯಿಂದಲೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.
ಶಿರಾಡಿ ಘಾಟ್ ಭಾಗದ ಹಲವೆಡೆ ಕುಸಿತ ಆಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ಸಿಲುಕಿದ್ದು ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಘಾಟ್ ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರಗಳು ರಸ್ತೆಗೆ ಬಿದ್ದಿದ್ದು ಮರಗಳನ್ನು ತೆರವುಗೊಳಿಸಲು ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ಇದೇ ವೇಳೆ, ಶಿರಾಡಿ ಘಾಟಿಯಲ್ಲಿ ರೈಲು ಹಳಿಯ ಮೇಲೂ ಮಣ್ಣು ಕುಸಿಯುತ್ತಿದ್ದು ರೈಲು ಸಂಚಾರದಲ್ಲು ವ್ಯತ್ಯಯವಾಗಿದೆ. ಬೆಂಗಳೂರು - ಕಾರವಾರ ರೈಲನ್ನು ಹಾಸನದ ಬಳಿಕ ಡೈವರ್ಟ್ ಮಾಡಿದ್ದು ಸುಬ್ರಹ್ಮಣ್ಯ ಹಳಿಯ ಬದಲು ಹುಬ್ಬಳ್ಳಿ ಮೂಲಕ ಕಾರವಾರ ತಲುಪುವಂತೆ ಮಾಡಲಾಗಿದೆ.
ಹಾಸನ ರೈಲಿನಲ್ಲಿ ಬೆಂಕಿ, ನಂದಿಸಿದ ಸಿಬಂದಿ
ಇದೇ ವೇಳೆ, ಚಲಿಸುತ್ತಿದ್ದ ರೈಲಿನ ಬೋಗಿಯ ಅಡಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತು ಹಾಸನ ರೈಲ್ವೇ ನಿಲ್ದಾಣದಲ್ಲಿ ಬೆಂಕಿ ನಂದಿಸಿ ಸಿಬಂದಿ ಅಪಾಯ ತಪ್ಪಿಸಿದ್ದಾರೆ. ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಾಸನ ರೈಲು ನಿಲ್ದಾಣ ಪ್ಲಾಟ್ ಸಂಖ್ಯೆ ಎರಡರಲ್ಲಿ ನಿಂತಿದ್ದಾಗ ಬೋಗಿವೊಂದರ ಕೆಳ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ತಕ್ಷಣವೇ ಇದನ್ನು ಗಮನಿಸಿದ ಸಿಬಂದಿ ಬೆಂಕಿ ನಂದಿಸಿದ್ದಾರೆ.
Heavy rainfall in the Malnad region has triggered a massive landslide at Shiradi Ghat on National Highway 75, severely disrupting both road and rail traffic between Bengaluru and Mangaluru.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm