ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm