ಬ್ರೇಕಿಂಗ್ ನ್ಯೂಸ್
19-08-25 07:04 pm Mangalore Correspondent ಕರಾವಳಿ
ಪುತ್ತೂರು, ಆ.19 : ಸಹಪಾಠಿ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಆಕೆಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ, ಮಗು ಮತ್ತು ಆರೋಪಿ ಯುವಕನ ಡಿಎನ್ಎ ಪರೀಕ್ಷೆ ನಡೆಸಲಾಗಿದೆ.
ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಮಗ ಶ್ರೀಕೃಷ್ಣ ಜೆ.ರಾವ್ ತನ್ನ ಸಹಪಾಠಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡುವ ಹೊತ್ತಿನಲ್ಲಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಯುವತಿಗೆ ಬಿಜೆಪಿ ಮುಖಂಡನ ಮಗನ ವಂಚನೆ ಎಂಬ ವಿಚಾರ ಭಾರೀ ಸುದ್ದಿಯಾಗಿತ್ತು. ಇತ್ತ ಯುವತಿ ಮಗುವಿಗೆ ಜನ್ಮ ನೀಡಿದ್ದು, ಆರೋಪಿಯನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೀಗ ಮಗುವಿಗೆ ಮೂರು ತಿಂಗಳಾಗುತ್ತಲೇ ಸಂತ್ರಸ್ತೆ, ಮಗು ಮತ್ತು ಆರೋಪಿ ಮೂವರ ರಕ್ತವನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ. ನ್ಯಾಯಾಧೀಶರ ಮುಂದೆಯೇ ಮೂವರ ರಕ್ತದ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ನಡೆದಿದ್ದು, ಮೂವರ ರಕ್ತದ ಮಾದರಿಯನ್ನು ಬೆಂಗಳೂರಿನ ಪರಿಕ್ಷಾಲಯಕ್ಕೆ ಪೊಲೀಸರು ಕಳುಹಿಸಿದ್ದಾರೆ.
ಈ ನಡುವೆ, ವಿಶ್ವಕರ್ಮ ಸಮಾಜದ ಸಂಘಟನೆಗಳ ಮುಖಂಡರು, ರಾಜಕೀಯ ನಾಯಕರು ಯುವಕನ ಮನವೊಲಿಸುವ ಕೆಲಸ ಮಾಡಿದ್ದಾರೆ. ಆರೋಪಿ ಯುವಕ ಡಿಎನ್ಎ ಪರೀಕ್ಷೆಯಲ್ಲಿ ಸಾಬೀತಾದರೆ ಮಾತ್ರ ಮದುವೆಯಾಗುತ್ತೇನೆ ಎಂದು ತಿಳಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿ ಯುವಕ ತಾನು ಮದುವೆಯಾಗಲ್ಲ ಎಂದು ಹಠ ಹಿಡಿದರೆ ಹತ್ತು ವರ್ಷ ಜೈಲು ಪಾಲಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆಯ ಉತ್ತರದತ್ತ ಎಲ್ಲರ ಕುತೂಹಲ ನೆಟ್ಟಿದೆ.
In a sensational case that has stirred public debate, DNA tests have been conducted on a young woman, her infant, and the accused youth — son of a local BJP leader — in connection with allegations that he fathered a child and then refused to marry the mother.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm