ಬ್ರೇಕಿಂಗ್ ನ್ಯೂಸ್
20-08-25 10:19 pm Mangalore Correspondent ಕರಾವಳಿ
ಮಂಗಳೂರು, ಆ.20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀಕೃಷ್ಣ ಜನ್ಮಾಷ್ಟಮಿ ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ಮೇಲೆ, ಸೌಂಡ್ ಸಿಸ್ಟಮ್ ಮಾಲಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲೂ ಇಂತಹ ನಿಯಮ ಆದೇಶಗಳಿದ್ದರೂ ಹಬ್ಬದ ಸಂಭ್ರಮಕ್ಕೆ ಕಿಂಚಿತ್ತೂ ಅಡ್ಡಿಪಡಿಸಿಲ್ಲ. ರಾತ್ರಿ ಹತ್ತೂವರೆ ನಂತರ ಯಾವುದೇ ಕಾರ್ಯಕ್ರಮ ನಡೆಯಬಾರದು, ಮೊಸರು ಕುಡಿಕೆಗೆ ಕಟ್ಟಿರುವ ಮಡಿಕೆಗಳನ್ನು ನಾಳೆ ಬಂದು ಒಡೆಯಿರಿ ಎಂದು ಪೊಲೀಸರು ಹೇಳುವುದು ಎಷ್ಟು ಸರಿ? ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನ ರೊಚ್ಚಿಗೆದ್ದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
BJP MLA Vedavyas Kamath has strongly criticized the Karnataka Congress government for allegedly disrupting Krishna Janmashtami celebrations in Dakshina Kannada district under the pretext of enforcing legal restrictions. Speaking during the assembly session, Kamath accused the government of hurting Hindu religious sentiments.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm