ಬ್ರೇಕಿಂಗ್ ನ್ಯೂಸ್
21-08-25 03:44 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.21 : ಧರ್ಮಸ್ಥಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ರೇಪ್ ಮಾಡಿ ಕೊಲೆ ಮಾಡಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಿದ್ದ ದೂತ ಯೂಟ್ಯೂಬ್ ಚಾನೆಲಿನ ಸಮೀರ್ ಎಂ.ಡಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದತ ಬೆನ್ನಲ್ಲೇ ಸಮೀರ್ ಪರ ವಕೀಲರು ಮಂಗಳೂರಿನ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳ ಠಾಣೆ ಪಿಎಸ್ಐ ಸಮರ್ಥ್ ಗಾಣಿಗೇರ ದೂರಿನಂತೆ ಕಳೆದ ಜುಲೈ 12ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ ತನ್ನ ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ ಮಾಡಿದ್ದ. ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಸಾವಿರಾರು ಹೆಣಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ್ದಾನೆಂದು ತಪ್ಪಾಗಿ ಬಿಂಬಿಸಿ ವಿಡಿಯೋ ಪ್ರಸಾರ ಮಾಡಿದ್ದ.
ಎಐ ತಂತ್ರಜ್ಞಾನದಲ್ಲಿ ವಿಡಿಯೋ ಸೃಷ್ಟಿಸಿ, ಆಮೂಲಕ ಜನರ ಭಾವನೆ ಕದಡಿಸಲು ಯತ್ನಿಸಿದ್ದಾಗಿ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಠಾಣೆಯಲ್ಲಿ ಆ ರೀತಿ ಕೇಸು ದಾಖಲಾಗಿರದಿದ್ದರೂ, ಸಾವಿರ ಜನರನ್ನು ರೇಪ್ ಮಾಡಿ ಕೊಲೆಗೈದಿದ್ದಾಗಿ ಸುದ್ದಿ ಮಾಡಿ ಜನರ ಭಾವನೆ ಕದಡುವಂತೆ ಮಾಡಿದ್ದ. ಸುಳ್ಳು ಸುದ್ದಿ ಪ್ರಸಾರ ಮಾಡಿದ ಬಗ್ಗೆ ಧರ್ಮಸ್ಥಳ ಠಾಣೆ ಪಿಎಸ್ಐ, ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಜುಲೈ 12 ರಂದು ಪ್ರಕರಣ ದಾಖಲಾಗಿತ್ತು. ಇದೀಗ ಹೆಣ ಹೂತ ಪ್ರಕರಣ ಉಲ್ಟಾ ಹೊಡೆಯುತ್ತಲೇ ಸಮೀರ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸಮೀರ್ ಬಂಧನ ಭೀತಿಯಲ್ಲಿರುವುದರಿಂದ ನಾಪತ್ತೆಯಾಗಿದ್ದು ನಿರೀಕ್ಷಣಾ ಜಾಮೀನಿಗಾಗಿ ಸಮೀರ್ ಪರ ವಕೀಲರು ಮಂಗಳೂರಿನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
An FIR has been filed against Sameer M.D., associated with the YouTube channel ‘Doota’, for allegedly spreading false and inflammatory news claiming that over a thousand people were raped and murdered in Dharmasthala. Belthangady police have launched a search operation to arrest the accused.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm