ಬ್ರೇಕಿಂಗ್ ನ್ಯೂಸ್
22-08-25 04:21 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.22 : ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ಧಾರೆಂದು ಗಿರೀಶ್ ಮಟ್ಟಣ್ಣನವರ್, ಜಯಂತ್ ಸೇರಿದಂತೆ 7ರಿಂದ 10 ಮಂದಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಉಡುಪಿ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತಿಮರೋಡಿಗೆ ಎರಡು ಬಾರಿ ವಿಚಾರಣೆಗೆ ನೋಟಿಸ್ ಕೊಟ್ಟಿದ್ದರೂ ಬಂದಿರಲಿಲ್ಲ. ಗುರುವಾರ ಬೆಳಗ್ಗೆ 9 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಪೊಲೀಸರ ನೋಟಿಸ್ಗೆ, ‘15 ದಿನದೊಳಗೆ ಹಾಜರಾಗುತ್ತೇನೆ’ ಎಂದು ಮಹೇಶ್ ಶೆಟ್ಟಿ ಅದೇ ನೋಟಿಸ್ನಲ್ಲೇ ಉತ್ತರಿಸಿ ಸಹಿ ಮಾಡಿದ್ದರು. ಇದರ ಬೆನ್ನಲ್ಲೇ ಪೊಲೀಸರು ಅವರ ನಿವಾಸಕ್ಕೆ ದೌಡಾಯಿಸಿ ಅವರನ್ನು ವಶಕ್ಕೆ ಪಡೆದಿದ್ದರು.

ಈ ವೇಳೆ, ಜೊತೆಗಿದ್ದ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಅಲ್ಲಿದ್ದ ಇತರ ಕಾರ್ಯಕರ್ತರು ಬಂಧನಕ್ಕೆ ಅಡ್ಡಿಪಡಿಸಿದ್ದರು. ಇದಲ್ಲದೆ, ಕೆಲವು ಕಾರ್ಯಕರ್ತರು ಉಡುಪಿ ವರೆಗೂ ಪೊಲೀಸ್ ವಾಹನ ಹಿಂಬಾಲಿಸಿದ್ದರು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಾನೇ ಸರೆಂಡರ್ ಆಗ್ತೀನಿ, ತ್ರಾಸ ಯಾಕೆ ?
ತಮ್ಮ ವಿರುದ್ಧ ಕೇಸ್ ದಾಖಲಾದ ವಿಚಾರ ಗೊತ್ತಾಗುತ್ತಿದ್ದಂತೆ ಗಿರೀಶ್ ಮಟ್ಟಣ್ಣನವರ್ ಶುಕ್ರವಾರ ಬೆಳಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದಿದ್ದು, ಪೊಲೀಸರು ಡೀಸೆಲ್ ಖರ್ಚು ಬಂಧನಕ್ಕೆ ತ್ರಾಸ ಪಡೋದು ಬೇಡ, ನಾನೇ ಸರೆಂಡರ್ ಆಗುವೆ ಎಂದು ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ವೇಳೆ ಮಾತನಾಡಿದ ಮಟ್ಟಣನವರ್, ಕೋರ್ಟ್ ಹಾಗೂ ಪೊಲೀಸ್ ಸ್ಟೇಷನ್ ಅಂದ್ರೆ ನನಗೆ ಬೀಗರ ಮನೆಯಂತಾಗಿದೆ. ಮಾನವ ಹಕ್ಕುಗಳ ಆಯೋಗದ ಜೊತೆಗೆ ಬಂದಿದ್ದೇವೆ. ನಿನ್ನೆ ನೂರು ಜನ ಪೊಲೀಸರು ಬಂಧನಕ್ಕೆ ಬಂದಿದ್ದರು. ಈ ವೇಳೆ ನಾವು ಯಾರ ಕೆಲಸಕ್ಕೂ ಅಡ್ಡಿಪಡಿಸಿಲ್ಲ. ಮಹೇಶ್ ತಿಮರೋಡಿ, ಜಯಂತ್ ಮತ್ತು ನನ್ನ ವಿರುದ್ಧ ಸೇರಿ 30 ಜನರ ಮೇಲೆ ಕೇಸ್ ಹಾಕಿದ್ದಾರೆ. ಸುಮ್ಮನೆ ಅವರ ಪೆಟ್ರೋಲ್ ವೇಸ್ಟ್ ಆಗೋದು ಬೇಡ. ಹೀಗಾಗಿ ಬಂಧನ ಮಾಡೋದಾದ್ರೆ ಮಾಡಲಿ ಅಂತ ಬಂದಿದ್ದೇನೆ. ಎಸ್ ಐ ಟಿಗೆ ಭೀಮಾ ಸುಳ್ಳು ಹೇಳಿದ್ದಕ್ಕೆ ಬಂಧನ ಅಂತ ಸುಳ್ಳು ಹೇಳ್ತಾ ಇದ್ದಾರೆ.
ನಮ್ಮನ್ನ ಭಯ ಪಡಿಸೋ ಕೆಲಸ ಆಗ್ತಾ ಇದೆ. ನಾವು ಯಾವುದೇ ಕಾರಣಕ್ಕೂ ಭಯ ಪಡೋದಿಲ್ಲ. ನಮ್ಮ ಮೇಲೆ ಕೇಸ್ ಮೇಲೆ ಕೇಸ್ ಹಾಕ್ತಾ ಇದ್ದಾರೆ. ಇದುವರೆಗೂ ನನ್ನ ಮೇಲೆ ನಾಲ್ಕೈದು ಕೇಸ್ ಹಾಕಿದ್ದಾರೆ. ಮಹೇಶ್ ಶೆಟ್ಟಿ ಮೇಲೆ 10ಕ್ಕೂ ಹೆಚ್ಚು ಕೇಸ್ ಹಾಕಿದ್ದಾರೆ. ಪ್ರತಿನಿತ್ಯ ಒಂದಲ್ಲಾ ಒಂದು ಕೇಸ್ ಹಾಕ್ತಾನೆ ಇದ್ದಾರೆ. ಎಲ್ಲವನ್ನು ಎದುರಿಸೋಕೆ ನಾವು ಸಿದ್ದರಿದ್ದೇವೆ ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿ ಪೊಲೀಸರು ಅವರನ್ನು ಘಟನೆ ಸಂಬಂಧಿಸಿ ವಿಚಾರಣೆ ನಡೆಸಿದ್ದಾರೆ.
A case has been registered against Girish Mattannavar, Jayanth, and 7–10 others at Belthangady Police Station for allegedly obstructing police duty during the arrest of activist Mahesh Shetty Timarodi. The complaint was filed by a Sub-Inspector from Brahmavar Police Station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm