ಬ್ರೇಕಿಂಗ್ ನ್ಯೂಸ್
22-08-25 04:21 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.22 : ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ಧಾರೆಂದು ಗಿರೀಶ್ ಮಟ್ಟಣ್ಣನವರ್, ಜಯಂತ್ ಸೇರಿದಂತೆ 7ರಿಂದ 10 ಮಂದಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಉಡುಪಿ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತಿಮರೋಡಿಗೆ ಎರಡು ಬಾರಿ ವಿಚಾರಣೆಗೆ ನೋಟಿಸ್ ಕೊಟ್ಟಿದ್ದರೂ ಬಂದಿರಲಿಲ್ಲ. ಗುರುವಾರ ಬೆಳಗ್ಗೆ 9 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಪೊಲೀಸರ ನೋಟಿಸ್ಗೆ, ‘15 ದಿನದೊಳಗೆ ಹಾಜರಾಗುತ್ತೇನೆ’ ಎಂದು ಮಹೇಶ್ ಶೆಟ್ಟಿ ಅದೇ ನೋಟಿಸ್ನಲ್ಲೇ ಉತ್ತರಿಸಿ ಸಹಿ ಮಾಡಿದ್ದರು. ಇದರ ಬೆನ್ನಲ್ಲೇ ಪೊಲೀಸರು ಅವರ ನಿವಾಸಕ್ಕೆ ದೌಡಾಯಿಸಿ ಅವರನ್ನು ವಶಕ್ಕೆ ಪಡೆದಿದ್ದರು.

ಈ ವೇಳೆ, ಜೊತೆಗಿದ್ದ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಅಲ್ಲಿದ್ದ ಇತರ ಕಾರ್ಯಕರ್ತರು ಬಂಧನಕ್ಕೆ ಅಡ್ಡಿಪಡಿಸಿದ್ದರು. ಇದಲ್ಲದೆ, ಕೆಲವು ಕಾರ್ಯಕರ್ತರು ಉಡುಪಿ ವರೆಗೂ ಪೊಲೀಸ್ ವಾಹನ ಹಿಂಬಾಲಿಸಿದ್ದರು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಾನೇ ಸರೆಂಡರ್ ಆಗ್ತೀನಿ, ತ್ರಾಸ ಯಾಕೆ ?
ತಮ್ಮ ವಿರುದ್ಧ ಕೇಸ್ ದಾಖಲಾದ ವಿಚಾರ ಗೊತ್ತಾಗುತ್ತಿದ್ದಂತೆ ಗಿರೀಶ್ ಮಟ್ಟಣ್ಣನವರ್ ಶುಕ್ರವಾರ ಬೆಳಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದಿದ್ದು, ಪೊಲೀಸರು ಡೀಸೆಲ್ ಖರ್ಚು ಬಂಧನಕ್ಕೆ ತ್ರಾಸ ಪಡೋದು ಬೇಡ, ನಾನೇ ಸರೆಂಡರ್ ಆಗುವೆ ಎಂದು ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ವೇಳೆ ಮಾತನಾಡಿದ ಮಟ್ಟಣನವರ್, ಕೋರ್ಟ್ ಹಾಗೂ ಪೊಲೀಸ್ ಸ್ಟೇಷನ್ ಅಂದ್ರೆ ನನಗೆ ಬೀಗರ ಮನೆಯಂತಾಗಿದೆ. ಮಾನವ ಹಕ್ಕುಗಳ ಆಯೋಗದ ಜೊತೆಗೆ ಬಂದಿದ್ದೇವೆ. ನಿನ್ನೆ ನೂರು ಜನ ಪೊಲೀಸರು ಬಂಧನಕ್ಕೆ ಬಂದಿದ್ದರು. ಈ ವೇಳೆ ನಾವು ಯಾರ ಕೆಲಸಕ್ಕೂ ಅಡ್ಡಿಪಡಿಸಿಲ್ಲ. ಮಹೇಶ್ ತಿಮರೋಡಿ, ಜಯಂತ್ ಮತ್ತು ನನ್ನ ವಿರುದ್ಧ ಸೇರಿ 30 ಜನರ ಮೇಲೆ ಕೇಸ್ ಹಾಕಿದ್ದಾರೆ. ಸುಮ್ಮನೆ ಅವರ ಪೆಟ್ರೋಲ್ ವೇಸ್ಟ್ ಆಗೋದು ಬೇಡ. ಹೀಗಾಗಿ ಬಂಧನ ಮಾಡೋದಾದ್ರೆ ಮಾಡಲಿ ಅಂತ ಬಂದಿದ್ದೇನೆ. ಎಸ್ ಐ ಟಿಗೆ ಭೀಮಾ ಸುಳ್ಳು ಹೇಳಿದ್ದಕ್ಕೆ ಬಂಧನ ಅಂತ ಸುಳ್ಳು ಹೇಳ್ತಾ ಇದ್ದಾರೆ.
ನಮ್ಮನ್ನ ಭಯ ಪಡಿಸೋ ಕೆಲಸ ಆಗ್ತಾ ಇದೆ. ನಾವು ಯಾವುದೇ ಕಾರಣಕ್ಕೂ ಭಯ ಪಡೋದಿಲ್ಲ. ನಮ್ಮ ಮೇಲೆ ಕೇಸ್ ಮೇಲೆ ಕೇಸ್ ಹಾಕ್ತಾ ಇದ್ದಾರೆ. ಇದುವರೆಗೂ ನನ್ನ ಮೇಲೆ ನಾಲ್ಕೈದು ಕೇಸ್ ಹಾಕಿದ್ದಾರೆ. ಮಹೇಶ್ ಶೆಟ್ಟಿ ಮೇಲೆ 10ಕ್ಕೂ ಹೆಚ್ಚು ಕೇಸ್ ಹಾಕಿದ್ದಾರೆ. ಪ್ರತಿನಿತ್ಯ ಒಂದಲ್ಲಾ ಒಂದು ಕೇಸ್ ಹಾಕ್ತಾನೆ ಇದ್ದಾರೆ. ಎಲ್ಲವನ್ನು ಎದುರಿಸೋಕೆ ನಾವು ಸಿದ್ದರಿದ್ದೇವೆ ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿ ಪೊಲೀಸರು ಅವರನ್ನು ಘಟನೆ ಸಂಬಂಧಿಸಿ ವಿಚಾರಣೆ ನಡೆಸಿದ್ದಾರೆ.
A case has been registered against Girish Mattannavar, Jayanth, and 7–10 others at Belthangady Police Station for allegedly obstructing police duty during the arrest of activist Mahesh Shetty Timarodi. The complaint was filed by a Sub-Inspector from Brahmavar Police Station.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm