ಬ್ರೇಕಿಂಗ್ ನ್ಯೂಸ್
23-08-25 01:29 pm Udupi Correspondent ಕರಾವಳಿ
ಉಡುಪಿ, ಆ.23: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ಕಾರು ಪಲ್ಟಿಯಾಗಿ ಓರ್ವ ಪ್ರಯಾಣಿಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಕಾಪು ಠಾಣೆ ವ್ಯಾಪ್ತಿಯ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಬೆಳ್ಮಣ್ ನಿವಾಸಿ ಮರ್ವಿನ್ ಮೆಂಡೋನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾ ಛಾಯಾಗ್ರಹಣ ಮಾಡುತ್ತಿದ್ದ ಮರ್ವಿನ್ ಡಿಜೆ ಸೌಂಡ್ಸ್ ವೃತ್ತಿಯನ್ನೂ ಮಾಡುತ್ತಿದ್ದರು. ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದ್ದು ನಾಯಿ ಅಡ್ಡ ಬಂತೆಂದು ದಿಢೀರ್ ಬ್ರೇಕ್ ತುಳಿದು ಪಲ್ಟಿಯಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದರಿಂದ ಒಳಗಿದ್ದವರು ತೀವ್ರ ಗಾಯಗೊಂಡಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ತಕ್ಷಣ ಸ್ಥಳೀಯರು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಮರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಒಂದು ದಿನ ಹಿಂದಷ್ಟೇ ಮರ್ವಿನ್ ಅವರು ತಮ್ಮ ಹೊಸ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಅದನ್ನು ಅವರು ಎಪಿಡಿ ಮ್ಯೂಸಿಕ್ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು.
D J Mervin, a 35-year-old cinematographer, tragically passed away in a car accident near Muloor while traveling from Udupi to Mangaluru with video editor Prajwal Suvarna, Prasad, Vignesh and an unidentified person. The incident occurred at around 3 am, when they swerved to avoid a street dog, causing their car to overturn.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm