ಬ್ರೇಕಿಂಗ್ ನ್ಯೂಸ್
23-08-25 01:29 pm Udupi Correspondent ಕರಾವಳಿ
ಉಡುಪಿ, ಆ.23: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ಕಾರು ಪಲ್ಟಿಯಾಗಿ ಓರ್ವ ಪ್ರಯಾಣಿಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಕಾಪು ಠಾಣೆ ವ್ಯಾಪ್ತಿಯ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಬೆಳ್ಮಣ್ ನಿವಾಸಿ ಮರ್ವಿನ್ ಮೆಂಡೋನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾ ಛಾಯಾಗ್ರಹಣ ಮಾಡುತ್ತಿದ್ದ ಮರ್ವಿನ್ ಡಿಜೆ ಸೌಂಡ್ಸ್ ವೃತ್ತಿಯನ್ನೂ ಮಾಡುತ್ತಿದ್ದರು. ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದ್ದು ನಾಯಿ ಅಡ್ಡ ಬಂತೆಂದು ದಿಢೀರ್ ಬ್ರೇಕ್ ತುಳಿದು ಪಲ್ಟಿಯಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದರಿಂದ ಒಳಗಿದ್ದವರು ತೀವ್ರ ಗಾಯಗೊಂಡಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ತಕ್ಷಣ ಸ್ಥಳೀಯರು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಮರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಒಂದು ದಿನ ಹಿಂದಷ್ಟೇ ಮರ್ವಿನ್ ಅವರು ತಮ್ಮ ಹೊಸ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಅದನ್ನು ಅವರು ಎಪಿಡಿ ಮ್ಯೂಸಿಕ್ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು.
D J Mervin, a 35-year-old cinematographer, tragically passed away in a car accident near Muloor while traveling from Udupi to Mangaluru with video editor Prajwal Suvarna, Prasad, Vignesh and an unidentified person. The incident occurred at around 3 am, when they swerved to avoid a street dog, causing their car to overturn.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm