ಬ್ರೇಕಿಂಗ್ ನ್ಯೂಸ್
24-08-25 02:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ 24 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ಅಪರಾಧ ಕೃತ್ಯಗಳ ಆರೋಪ ಬಗ್ಗೆ AI ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಕೇಸ್ ದಾಖಲಾಗಿದೆ. ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕರೆದಾಗ ವಿಚಾರಣೆಗೆ ಹಾಜರಾಗಲು ಆದೇಶ ನೀಡಿತ್ತು. ಈ ಹಿನ್ನೆಲೆ ಇಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ಸೌಜನ್ಯ ಕೇಸ್ ಹೋರಾಟಗಾರ ಮಹೇಶ್ ತಿಮರೋಡಿ ಅವರ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.

ನಾಲ್ವರು ವಕೀಲರ ಜೊತೆ ಬಂದ ಸಮೀರ್ :
ತಿಮರೋಡಿಯ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಬಂದ ಸಮೀರ್ ವಿಚಾರಣೆಗೆಂದು ಠಾಣೆ ಒಳಗೆ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮನೆಗೆ ನೋಟಿಸ್ ಅಂಟಿಸಿ ಬಂದಿದ್ರು.
ಕ್ರೈಮ್ ನಂ 42/2025 ಕೇಸ್ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈಗಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ರು. ಸಮೀರ್ ಹಾಜರಾಗಿರಲಿಲ್ಲ.
ಬಂಧನ ಭೀತಿಯಲ್ಲಿದ್ದ ಸಮೀರ್ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆಗೆ ಸಹಕರಿಸುವಂತೆ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.
YouTuber M.D. Sameer, who had created an AI-generated video related to alleged criminal incidents in Dharmasthala, appeared for police inquiry today at the Beltangady Police Station, accompanied by four lawyers. A case had been registered against him in connection with the video, and he was recently granted anticipatory bail by the Dakshina Kannada District Sessions Court.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm